ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 30 SEPTEMBER 2024 : ಚೀನಾ ಬೆಳ್ಳುಳ್ಳಿ (garlic) ಮಾರಾಟದ ಶಂಕೆ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್ಎಸ್ಎಸ್ಎಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳುಳ್ಳಿ ಸ್ಯಾಂಪಲ್ಗಳನ್ನು ವಶಕ್ಕೆ ಪಡೆದು ಲ್ಯಾಬ್ಗೆ ಕಳುಹಿಸಲಾಗಿದೆ.
ಶಿವಮೊಗ್ಗ ಎಪಿಎಂಸಿ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ ಕೆಲವು ಮಾರಾಟಗಾರರ ಮೇಲೆ ದಾಳಿ ನಡೆಸಿದ್ದಾರೆ. ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವ ಶಂಕೆ ಮೇರೆಗೆ ಎಫ್ಎಸ್ಎಸ್ಎಐ ಅಧಿಕಾರಿ ಸದಾಶಿವ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಹಿನ್ನೆಲೆ ಕೇಂದ್ರ ಸರ್ಕಾರ ಚೀನಾ ಬೆಳ್ಳುಳ್ಳಿ ಮಾರಾಟವನ್ನು ಭಾರತದಲ್ಲಿ ನಿಷೇಧಿಸಿದೆ. ಹೀಗಿದ್ದೂ ದೇಶದ ವಿವಿಧೆಡೆ ಚೀನಾ ಬೆಳ್ಳುಳ್ಳಿ ಮಾರಾಟದ ಆರೋಪಗಳಿದ್ದವು. ಶಿವಮೊಗ್ಗದಲ್ಲಿಯು ಇದೇ ಶಂಕೆ ಮೇರೆಗೆ ದಾಳಿ ನಡೆಸಲಾಗಿದೆ. ಸದ್ಯ ಸಂಗ್ರಹಿಸಲಾಗಿರುವ ಸ್ಯಾಂಪಲ್ ಆನ್ನು ಲ್ಯಾಬ್ಗೆ ಕಳುಹಿಸಲಾಗಿದೆ. ವರದಿ ಬಳಿಕ ಸ್ಪಷ್ಟತೆ ಲಭಿಸಲಿದೆ.
ಇದನ್ನೂ ಓದಿ » ಕರ್ನಾಟಕ ಸಂಘ, ನೂತನ ಕಾರ್ಯಕಾರಿ ಸಮಿತಿಗೆ 15 ಮಂದಿ ಆಯ್ಕೆ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





