SORABA NEWS, 2 OCTOBER 2024 : ರಸ್ತೆಯಲ್ಲಿ ಹಾವು (Snake) ಅಡ್ಡ ಬಂತು ಅಂತಾ ಬೈಕ್ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದ ಶಿಕ್ಷಕರೊಬ್ಬರಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಸೊರಬ – ಜಂಗಿನಕೊಪ್ಪ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಕೆಲಸ ಮುಗಿಸಿ ಶಿಕ್ಷಕ ನಟರಾಜ್ ಕುಬಟೂರು ಅವರು ಬೈಕ್ನಲ್ಲಿ ಮನೆಗೆ ಮರಳುತ್ತಿದ್ದರು. ರಸ್ತೆಯಲ್ಲಿ ಹಾವು ಬಂದಿದ್ದರಿಂದ ಬೈಕ್ ನಿಲ್ಲಿಸಿ, ಹಿಂಬದಿಗೆ ಬಂದು ನಿಂತಿದ್ದರು. ಈ ವೇಳೆ ಸೊರಬ ಕಡೆಯಿಂದ ವೇಗವಾಗಿ ಬಂದ ಸ್ಪ್ಲೆಂಡರ್ ಬೈಕ್, ಶಿಕ್ಷಕ ನಟರಾಜ್ ಅವರಿಗೆ ಡಿಕ್ಕಿ ಹೊಡೆದಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಭುಜ, ಮೂಗು ಸೇರಿದಂತೆ ವಿವಿಧೆಡೆ ಗಾಯವಾಗಿತ್ತು.
![]() |
ಶಿಕ್ಷಕ ನಟರಾಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್ ಸಂಗ್ರಹ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200