ಶಿವಮೊಗ್ಗ ದಸರಾದಲ್ಲಿ 68 ಕಾರ್ಯಕ್ರಮ, ಏನೆಲ್ಲ ನಡೆಯುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 2 OCTOBER 2024 : ಈ ಬಾರಿಯು ಶಿವಮೊಗ್ಗ ದಸರಾ (Dasara) ಮಹೋತ್ಸವವನ್ನು ಅದ್ಧೂರಿಯಾಗಿ ನೆರೆವೇರಲಿದೆ. 68 ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರಸಿದ್ಧ ನಟ, ನಟಿಯರು ಸೇರಿ ಸುಮಾರು 5 ಸಾವಿರ ಕಲಾವಿದರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್‌.ಎನ್‌.ಚನ್ನಬಸಪ್ಪ, 2.35 ಕೋಟಿ ರೂ. ವೆಚ್ಚದಲ್ಲಿ ಈ ಬಾರಿ ದಸರಾ ಆಚರಣೆ ಮಾಡಲಾಗುತ್ತಿದೆ. ಆಯವ್ಯಯದಲ್ಲಿ 1.5 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.

ಯಾವೆಲ್ಲ ಕಾರ್ಯಕ್ರಮ ನಡೆಯಲಿದೆ?

» ಅ.3ರಂದು ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ದಸರಾವನ್ನು ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್‌ ಉದ್ಘಾಟಿಸಲಿದ್ದಾರೆ. ಕವಿಗೋಷ್ಠಿ, ನೃತ್ಯ ವೈಭವ, ಸುಗಮ ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5.30ಕ್ಕೆ ಯಕ್ಷ ದಸರಾ ನಡೆಯಲಿದೆ.

» ಅ.4ರಂದು ಕುವೆಂಪು ರಂಗಮಂದಿರದಲ್ಲಿ ಮಹಿಳಾ ದಸರಾ ನಡೆಯಲಿದೆ. ಭೀಮಾ ಸಿನಿಮಾದ ನಟಿ ಪ್ರಿಯಾ ಶಠಮರ್ಷಣ್‌ ಉದ್ಘಾಟನೆ ಮಾಡಲಿದ್ದಾರೆ. ಡಾ. ಅಂಬೇಡ್ಕರ್‌ ಭವನದಲ್ಲಿ ಬೆಳಗ್ಗೆ 9.30ಕ್ಕೆ ಚಲನ ಚಿತ್ರೋತ್ಸವವನ್ನು ನಟಿ, ಮಾಜಿ ಸಚಿವ ಉಮಾಶ್ರೀ ಉದ್ಘಾಟಿಸಲಿದ್ದಾರೆ. ಅ.4ರಂದು ಸಂಜೆ 4.30ಕ್ಕೆ ಪತ್ರಕರ್ತರ ದಸರಾಗೆ ಕುವೆಂಪು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರ ಡಾ ಎಂ.ಆರ್.ಸತ್ಯ ಪ್ರಕಾಶ್‌ ಉದ್ಘಾಟನೆ ಮಾಡಲಿದ್ದಾರೆ.

» ಅ.6ರಂದು ಬೆಳಗ್ಗೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಯೋಗ ದಸರಾವನ್ನು ಹಿರಿಯ ವೈದ್ಯ ಡಾ. ಎನ್‌.ಎಲ್‌.ನಾಯಕ್‌ ಉದ್ಘಾಟಿಸಲಿದ್ದಾರೆ. ಡಾ. ಅಂಬೇಡ್ಕರ್‌ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಚಲನಚಿತ್ರ ರಸಗ್ರಹಣ ಕಾರ್ಯಾಗಾರ ನಡೆಯಲಿದೆ. ಸಂಜೆ 5.30ಕ್ಕೆ ಕುವೆಂಪು ರಂಗಮಂದಿರದಲ್ಲಿ ರಂಗ ದಸರಾಕ್ಕೆ ರಂಗ ನಿರ್ದೇಶಕ ಮಂಜು ಕೊಡಗು ಉದ್ಘಾಟಿಸಲಿದ್ದಾರೆ.

021024 shimoga dasara news general image

» ಅ.6ರಂದು ಸಂಜೆ 6 ಗಂಟೆಗೆ ಡಾ. ಅಂಬೇಡ್ಕರ್‌ ಭವನದಲ್ಲಿ ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಕಮಲಾ ನೆಹರೂ ಕಾಲೇಜಿನಲ್ಲಿ ಗಮಕ ದಸರಾ ನಡೆಯಲಿದೆ.

» ಅ.8ರಂದು ಬೆಳಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಪೌರ ಕಾರ್ಮಿಕ ದಸರಾ ನಡೆಯಲಿದೆ. ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎ.ಅಮೃತ್‌ ರಾಜ್‌ ಉದ್ಘಾಟಿಸಲಿದ್ದಾರೆ.

MLA Channabasappa and Commissioner Kavitha Yogappanavar

ಇನ್ನು, ಕಲಾ ದಸರಾ, ಆಹಾರ ದಸರಾ, ಜ್ಞಾನ ದಸರಾ ಸೇರಿ ಒಟ್ಟು 68 ಈವೆಂಟ್‌ಗಳು ಈ ಬಾರಿ ದಸರಾದಲ್ಲಿ ಮಹೋತ್ಸವದಲ್ಲಿ ಇರಲಿದೆ.

ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಪಾಲಿಕೆ ಕಮಿಷನರ್‌ ಡಾ. ಕವಿತಾ ಯೋಗಪ್ಪನವರ್‌ ಸೇರಿ ಸುದ್ದಿಗೋಷ್ಠಿಯಲ್ಲಿದ್ದಾರೆ.

ಇದನ್ನೂ ಓದಿ » ನಾಳೆಯಿಂದ ಶಿವಮೊಗ್ಗ ದಸರಾ, ಉದ್ಘಾಟನೆಗೆ ಬರ್ತಿದ್ದಾರೆ ಖ್ಯಾತ ಸಿನಿಮಾ ನಿರ್ದೇಶಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2024

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

Leave a Comment