ಶಿವಮೊಗ್ಗ ಜಿಲ್ಲೆಯಲ್ಲಿ ಯಾವ್ಯಾವ ಗ್ಯಾರಂಟಿ ಯೋಜನೆ ಎಷ್ಟು ಜನರಿಗೆ ತಲುಪುತ್ತಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 3 OCTOBER 2024 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ (Guarantee Scheme) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐದು ಯೋಜನೆಗಳ ಫಲಾನುಭವಿಗಳ ಸಂಖ್ಯೆ, ಸರ್ಕಾರ ಮಾಡುತ್ತಿರುವ ವೆಚ್ಚದ ಕುರಿತು ಮಾಹಿತಿ ನೀಡಲಾಯಿತು. ಇದರ ಅಂಕಿ ಅಂಶ ಇಲ್ಲಿದೆ.

ಯಾವ್ಯಾವ ಯೋಜನೆ ಎಷ್ಟು ಜನರಿಗೆ ತಲುಪಿದೆ?

» ಅನ್ನಭಾಗ್ಯ ಯೋಜನೆ

ಶಿವಮೊಗ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೆ 16.86 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 8066 ಮಂದಿಗೆ ತಾಂತ್ರಿಕ ಕಾರಣದಿಂದ ಹಣ ವರ್ಗಾವಣೆ ಸಾಧ್ಯವಾಗಿಲ್ಲ. ಉಳಿದಂತೆ ಯೋಜನೆ ಪ್ರಾರಂಭದಿಂದ ಈ ವರ್ಷದ ಜೂನ್‌ ತಿಂಗಳವರೆಗೆ 257 ಕೋಟಿ ರೂ ವೆಚ್ಚ ಮಾಡಲಾಗಿದೆ.

Gauranteee-Schemes-in-shimoga-meeting.

» ಗೃಹ ಲಕ್ಷ್ಮಿ ಯೋಜನೆ

ಗೃಹ ಲಕ್ಷ್ಮಿ ಯೋಜನೆ ಅಡಿ ಜಿಲ್ಲೆಯಲ್ಲಿ 3,85,335 ಯಾಜಮಾನಿಯರು ಲಾಭ ಪಡೆಯುತ್ತಿದ್ದಾರೆ. ಶೇ.90ರಷ್ಟು ಯಜಮಾನಿಯರು ಈವರೆಗೂ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದಾರೆ. ಈ ಯೋಜನೆ ಅಡಿ ಪ್ರತಿ ತಿಂಗಳು ಯಜಮಾನಿಯರ ಬ್ಯಾಂಕ್‌ ಖಾತೆಗೆ 2 ಸಾವಿರ ರೂ. ನಗದು ವರ್ಗಾಯಿಸಲಾಗುತ್ತದೆ. ಪ್ರತಿ ತಿಂಗಳು ಶಿವಮೊಗ್ಗ ಜಿಲ್ಲೆಯ ಯಜಮಾನಿಯರಿಗೆ 76,19,94,000 ರೂ. ವೆಚ್ಚವಾಗಲಿದೆ. ಯೋಜನೆ ಜಾರಿ ಆದಾಗಿನಿಂದ ಜೂನ್‌ 2024ರವರೆಗೆ 799,83,78,00 ರೂ. ವೆಚ್ಚವಾಗಿದೆ.

» ಗೃಹ ಜ್ಯೋತಿ ಯೋಜನೆ

ಗೃಹ ಜ್ಯೋತಿ ಯೋಜನೆಗು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ಇದೆ. ಜಿಲ್ಲೆಯಲ್ಲಿ ಒಟ್ಟು ವಿದ್ಯುತ್‌ ಸಂಪರ್ಕ ಪಡೆದ ಮನೆಗಳ ಸಂಖ್ಯೆ 5,37,774. ಈ ಪೈಕಿ 4,70,458 ಲಕ್ಷ ಮನೆಗಳು ಯೋಜನೆ ವ್ಯಾಪ್ತಿಗೆ ಒಳಪಟ್ಟಿವೆ. ಯೋಜನೆ ಜಾರಿ ಆದಾಗಿನಿಂದ ಜೂನ್‌ 2024ರವರಗೆ 246,28,37,657 ರೂ. ವೆಚ್ಚವಾಗಿದೆ.

gaurantee scheme meeting in Shimoga

» ಶಕ್ತಿ ಯೋಜನೆ

ಶಕ್ತಿ ಯೋಜನೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ 3,03,61,531. 2023ರ ಜೂನ್‌ನಿಂದ 2024ರ ಸೆಪ್ಟೆಂಬರ್‌ 17ರವರೆಗೆ ಯೋಜನೆಯಿಂದ ಸಾರಿಗೆ ನಿಗಮಕ್ಕೆ 105,56,92,627 ರೂ. ಲಾಭವಾಗಿದೆ ಎಂದು ತಿಳಿಸಲಾಗಿದೆ. ಯೋಜನೆ ಜಾರಿಯಾದಾಗಿನಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ.61ರಷ್ಟು ಹೆಚ್ಚಳವಾಗಿದೆ.

» ಯುವನಿಧಿ ಯೋಜನೆ

ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 2836 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಈವರೆಗೆ ಸರ್ಕಾರ 3,28,56,00 ರೂ. ವೆಚ್ಚ ಮಾಡಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಸಕ್ರೆಬೈಲಿನಲ್ಲಿ ಆನೆಗಳಿಗೆ ತಾಲೀಮು ಶುರು, ಹೇಗಿರುತ್ತೆ ಟ್ರೈನಿಂಗ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 3, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment