SHIMOGA NEWS, 8 OCTOBER 2024 : ತೋಟದಲ್ಲಿ ಕಟ್ಟಿದ್ದ ಆರು ಕತ್ತೆಗಳು (Donkeys) ಕಳ್ಳತನವಾಗಿವೆ. ಮಾಲೀಕರು ಬೆಳಗ್ಗೆ ತೋಟಕ್ಕೆ ತೆರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಆರು ಕತ್ತೆಗಳು ನಾಪತ್ತೆ
ಮಿಳಘಟ್ಟದ ನಾಗರತ್ನ ಎಂಬುವವರು ಕತ್ತೆ ಸಾಕಾಣಿಕೆ ಮಾಡುತ್ತಿದ್ದಾರೆ. ತಮ್ಮ ಬಳಿ ಇದ್ದ ಆರು ಕತ್ತೆಗಳನ್ನು ಸಂತೆ ಕಡೂರಿನ ತೋಟವೊಂದರಲ್ಲಿ ಕಟ್ಟುತ್ತಿದ್ದರು. ಸೆ.27ರಂದು ರಾತ್ರಿ ತೋಟದಲ್ಲಿ ಕತ್ತೆಗಳನ್ನು ಕಟ್ಟಿ ಹಾಕಿ ಹೋಗಿದ್ದರು. ಮರುದಿನ ಬೆಳಗ್ಗೆ ತೋಟಕ್ಕೆ ಬಂದಾಗ ಕತ್ತೆಗಳು ನಾಪತ್ತೆಯಾಗಿದ್ದವು.
ಇಬ್ಬರ ಮೇಲೆ ಅನುಮಾನ
ಶಿವಮೊಗ್ಗದ ಇಬ್ಬರು ಯುವಕರು ಸಂತೆ ಕಡೂರಿನಲ್ಲಿ ನಾಗರತ್ನ ಅವರು ಕತ್ತೆಗಳನ್ನು ಎಲ್ಲಿ ಕಟ್ಟುತ್ತಾರೆ ಎಂದು ಸ್ಥಳೀಯರಲ್ಲಿ ವಿಚಾರಿಸಿದ್ದರು. ಅವರೆ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೆ ಸೆ.27ರ ರಾತ್ರಿ ಇಬ್ಬರು ಅಪರಿಚಿತರು ಕತ್ತೆಗಳನ್ನು ಕಟ್ಟಿದ್ದ ತೋಟದ ಸಮೀಪ ಓಡಾಡುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದರು. ಈ ಹಿನ್ನೆಲ ಇಬ್ಬರ ವಿರುದ್ಧ ದೂರು ನೀಡಲಾಗಿದೆ.
90 ಸಾವಿರ ರೂ. ಮೌಲ್ಯದ ಆರು ಕತ್ತೆಗಳು ಕಳುವಾಗಿವೆ ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಶಿವಮೊಗ್ಗದ NESನಲ್ಲಿ ಶಿಕ್ಷಕ, ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200