ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RIPPONPETE NEWS, 8 OCTOBER 2024 : ಮೂರಾಲ್ಕು ದಿನಗಳಿಂದ ಗ್ರಾಮ ಪಂಚಾಯಿತಿ (Grama Panchayat) ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಗ್ರಾಮ ಪಂಚಾಯಿತಿ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ಮುಷ್ಕರದ ಕಾರಣಕ್ಕೆ ಗ್ರಾಮಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಹಾಗಿದ್ದರೆ ಜನಪ್ರತಿನಿಧಿಗಳ ಅಗತ್ಯವೇನಿದೆ. ಚುನಾವಣೆಯಲ್ಲಿ ಜನರ ಎಲ್ಲ ದೂರುದುಮ್ಮಾನಗಳಿಗೂ ಪರಿಹಾರ ಕಲ್ಪಿಸುತ್ತೇವೆ ಎಂದು ಹೇಳಿ ಮತ ಪಡೆದ ಸದಸ್ಯರು, ತಮ್ಮ ನೈಜ ಕರ್ತವ್ಯ ಅರಿತುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನರ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯಿತಿ ಕಚೇರಿಯನ್ನು ತೆರೆದಿಡುವ ಬದಲು ತಮ್ಮ ಮನೆಗಳಿಗೆ ಸೀಮಿತರಾಗಿರುವ ಸದಸ್ಯರ ನಡವಳಿಕೆ ಒಪ್ಪುವಂತಹದ್ದಲ್ಲ. ಜನಪರವಾಗಿ ಇರಬೇಕಾದ ಗ್ರಾಮ ಪಂಚಾಯಿತಿ ಸದಸ್ಯರು ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಸರ್ಕಾರ ಅವರ ಸದಸ್ಯತ್ವ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ
LATEST NEWS
- ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

- ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು















