ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಜುಲೈ 2019
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಶ್ವಾಸಮತದಲ್ಲಿ ಸೋಲನುಭವಿಸಿದೆ. ಇದರ ಬೆನ್ನಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವ ಸಂಭ್ರಮ ಮೊಳಕೆಯೊಡೆದಿದೆ. ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ
ಬಿಜೆಪಿ ಕಚೇರಿ
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಪರವಾಗಿ ಘೋಷಣೆ ಕೂಗಿದರು.

ವಿನೋಬನಗರದಲ್ಲಿ ಯಡಿಯೂರಪ್ಪ ಮನೆ
ಯಡಿಯೂರಪ್ಪ ಅವರ ವಿನೋಬನಗರದ ನಿವಾಸದಲ್ಲೂ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು.

ಯಡಿಯೂರಪ್ಪ ಪರವಾಗಿ ಘೋಷಣೆ ಕೂಗಿದರು. ಯಡಿಯೂರಪ್ಪ ಪುತ್ರ ಅರುಣಾದೇವಿ, ಅವರ ಪತಿ ಉದಯ್ ಕುಮಾರ್ ಅವರು ಬಿಜೆಪಿ ಕಾರ್ಯಕರ್ತರು, ಯಡಿಯೂರಪ್ಪ ಅವರ ಅಭಿಮಾನಿಗಳಿಗೆ ಸಿಹಿ ಹಂಚಿದರು.

ಮಲ್ಲೇಶ್ವರ ನಗರದ ಈಶ್ವರಪ್ಪ ಮನೆ
ಈಶ್ವರಪ್ಪ ಅವರ ಮನೆಯಲ್ಲೂ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಇಲ್ಲಿಯೂ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಈಶ್ವರಪ್ಪ ಅವರ ಕುಟುಂಬದವರು, ಮೊಮ್ಮಕ್ಕಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





