ಶಿವಮೊಗ್ಗ ಜೈಲಿನಿಂದ ಕರೆ ಮಾಡಿ ಪತ್ನಿಗೆ ಬೆದರಿಕೆ ಒಡ್ಡಿದ ಖೈದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 15 OCTOBER 2024 : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Jail) ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದಾನೆ. ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಖೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2024ರ ಮಾರ್ಚ್‌ ತಿಂಗಳಿಂದ ಹಲವು ಭಾರಿ ಕರೆ ಮಾಡಿ ಒಂದು ಸಾವಿರ, ಎರಡು ಸಾವಿರದಂತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದಾನೆ. ಹಣ ಹಾಕದಿದ್ದಲ್ಲಿ ಜೈಲಿನಿಂದ ಹೊರ ಬಂದ ನಂತರ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಆತನ ಪತ್ನಿ ದೂರು ನೀಡಿದ್ದಾಳೆ.

ಇದನ್ನೂ ಓದಿ » ಶಿವಮೊಗ್ಗ ಜೈಲು, ಬೀಡಿಗಾಗಿ ಕಲ್ಲು ತೂರಾಟ, ಸ್ಥಳದಲ್ಲೆ ಡಿಐಜಿ ಮೊಕ್ಕಾಂ, ಅಧೀಕಕ್ಷರು ಬದಲಾವಣೆ

ಬೆಂಗಳೂರು ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಆರೋಪದ ಬೆನ್ನಿಗೆ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಮೊಬೈಲ್‌ ಚಾರ್ಜರ್‌ಗಳು ಲಭ್ಯವಾಗಿದ್ದವು ಎಂದು ಪ್ರಕರಣ ದಾಖಲಾಗಿತ್ತು.

PACE-COLLEGE-ADVT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment