ಮಲೆನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಸತ್ಯಾಗ್ರಹಕ್ಕೆ ದಿನಾಂಕ ಫಿಕ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 16 OCTOBER 2024 : ಶರಾವತಿ, ಚಕ್ರಾ, ವಾರಾಹಿ, ಸಾವೆಹಕ್ಲು, ತುಂಗಾ, ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ರೈತರಿಗೆ ಸರ್ಕಾರಗಳು ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿವೆ. ಈ ಭಾಗದ ರೈತರ ಭವಿಷ್ಯದ ಮೇಲೆ ತೂಗುಗತ್ತಿ ಇದೆ. ಹಾಗಾಗಿ ಪ್ರತ್ಯೇಕ ರಾಜ್ಯದ ಕೂಗೆದ್ದಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 12 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ (Malnad) ಸ್ಥಾಪನೆಯ ಕೂಗು ಎದ್ದಿದೆ.

ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅ.21ರ ಬೆಳಗ್ಗೆ 11 ಗಂಟೆಯಿಂದ ಸಾಗರ ತಾಲೂಕು ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ವಿವಿಧ ಸಂಘಟನೆಗಳ ಪ್ರಮುಖರು ಸುದ್ದಿಗೋಷ್ಠಿ ನಡೆಸಿದರು. ಆಗ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದೆ.

farmers-press-meet-about-sathyagraha

ಯಾರೆಲ್ಲ ಏನೆಲ್ಲ ಹೇಳಿದರು?

ರೈತರತ್ತ ಸರ್ಕಾರಗಳಿಗೆ ನಿರ್ಲಕ್ಷ್ಯ ಭಾವವಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದವರು ಮಲೆನಾಡಿಗರನ್ನು ಬ್ರಿಟೀಷರಿಗಿಂತಲು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಹಾಗಾಗಿ ಮಲೆನಾಡಿಗೆ ಪ್ರತ್ಯೇಕ ರಾಜ್ಯದ ರೂಪುರೇಷೆ ಸಿದ್ಧಪಡಿಸುವ ಅನಿವಾರ್ಯತೆ ಇದೆ. ಬೆಳಗಾವಿಯಿಂದ ಕೊಡಗು ಜಿಲ್ಲೆ ಒಳಗೊಂಡು ಪ್ರತ್ಯೇಕ ರಾಜ್ಯ ರಚಿಸಬೇಕು ಎಂದು ಹಲವು ಬಾರಿ ಚರ್ಚಿಸಲಾಗಿದೆ. ಈ ಬಾರಿ ರೈತರ ಹೋರಾಟವು ಕಾಗೋಡು ಚಳವಳಿ ಮಾದರಿಯಲ್ಲೇ ಆಹೋರಾತ್ರಿ ನಡೆಯಲಿದೆ. ಪೊಳ್ಳು ಭರವಸೆಗಳಿಗೆ ಜಗ್ಗುವುದಿಲ್ಲ.

ದಿನೇಶ್‌ ಸಿರಿವಾಳ, ರೈತ ಹೋರಾಟಗಾರ

ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಪಾದಯಾತ್ರೆ ಮಾಡಿ ಎರಡು ವರ್ಷ ತುಂಬಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮಸ್ಯೆಯ ಬಗ್ಗೆ ಅರಿವೇ ಇಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಸಭೆ ನಡೆಸಿ, ಕೇಂದ್ರದ ಹಂತದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಅವರು ತಮ್ಮ ಕರ್ತವ್ಯ ಮರೆತಿದ್ದಾರೆ. ಇದೆಲ್ಲದಕ್ಕೂ ಈ ಹೋರಾಟದಲ್ಲಿ ಉತ್ತರ ಕಂಡುಕೊಳ್ಳಲಿದ್ದೇವೆ. ಬೇಡಿಕೆಗಳು ಈಡೇರದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ.

ತೀ.ನಾ.ಶ್ರೀನಿವಾಸ್‌, ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ

ಮುಳುಗಡೆ ಸಂತ್ರಸ್ತರ ಸಮಸ್ಯೆ ಸಂಬಂಧ ಕಾರ್ಯಪಡೆ (ಟಾಸ್ಕ್ ಫೋರ್ಸ್) ರಚಿಸುವವರಿಗೆ ಹೋರಾಟ ನಿಲ್ಲುವುದಿಲ್ಲ. ಆಶ್ವಾಸನೆಯ ಸುತ್ತೋಲೆ ಹೊರಡಿಸಿದರೆ, ಹೋರಾಟ ಹಿಂಪಡೆಯಲು ಸಾಧ್ಯವಿಲ್ಲ. ಸರ್ಕಾರದಿಂದ ಅಧಿಕೃತ ಆದೇಶವಾಗಬೇಕು.

ವಿ.ಜಿ.ಶ್ರೀಕಾರ, ಸಮಾಜ ಸೇವಾ ಕಾರ್ಯಕರ್ತ

ಪ್ರಮುಖರಾದ ಶಿವಾನಂದ ಕುಗ್ವೆ, ರಾಷ್ಟ್ರೀಯ ಈಡಿಗ ಮಹಾಮಂಡಳ ತಾಲೂಕು ಅಧ್ಯಕ್ಷ ಮಂಜುನಾಥ, ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜೇಶ್‌ ಶೆಟ್ಟಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕ ಕೊನೆಯುಸಿರು

PACE-COLLEGE-PRAJNA-NEWS-ADVT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 16, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment