ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 17 OCTOBER 2024 : ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಜೆ.ಬಿ.ಜಕ್ಕಣಗೌಡರ್ (54) ಲಾಡ್ಜ್ವೊಂದರ (Lodge) ಕೊಠಡಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ಪೊಲೀಸರು ಶಂಕಿಸಿದ್ದಾರೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್ನ ಕೊಠಡಿಯಲ್ಲಿ ಬುಧವಾರ ರಾತ್ರಿ ಮೃತದೇಹ ಪತ್ತೆಯಾಗಿದೆ.
ನ್ಯಾಯಾಲಯದ ಕೆಲಸಕ್ಕೆ ತೆರಳಿದ್ದರು
ನ್ಯಾಯಾಲಯದ ಕೆಲಸ ನಿಮಿತ್ತ ತಹಶೀಲ್ದಾರ್ ಜೆ.ಬಿ.ಜಕ್ಕಣಗೌಡರ್ ಬೆಂಗಳೂರಿಗೆ ತೆರಳಿದ್ದರು. ವೈಭವ್ ಲಾಡ್ಜ್ನಲ್ಲಿ ಉಳಿದಿದ್ದರು. ಮಂಗಳವಾರ ಸಂಜೆಯಿಂದಲೂ ಜಕ್ಕಣಗೌಡರ್ ಅವರು ಯಾರ ಸಂಪರ್ಕಕ್ಕೂ ಅವರು ಸಿಕ್ಕಿರಲಿಲ್ಲ.

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆ ಅಬ್ಬರ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ನಂತರ ಮೊಬೈಲ್ ಲೊಕೇಶನ್ ಪರಿಶೀಲನೆ ನಡೆಸಿದಾಗ ಮೆಜೆಸ್ಟಿಕ್ ಸಮೀಪ ತೋರಿಸುತ್ತಿತ್ತು. ಅದನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ವೈಭವ್ ಲಾಡ್ಜ್ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ‘ಮೃತ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















