SHIMOGA NEWS, 20 OCTOBER 2024 : ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸಮಸ್ಯೆ ಪರಿಹರಿಸದೆ ಇದ್ದರೆ ಜೋಗದಲ್ಲಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (Dam) ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ. ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಜಿಲ್ಲಾ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಅಧ್ಯಕ್ಷ ಕೆ.ಎಂ.ಹೂವಪ್ಪ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರದಲ್ಲಿ ಅ.21ರಂದು ಸಾಗರದಲ್ಲಿ ಬೃಹತ್ ಮೆರವಣಿಗೆ, ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಇದಕ್ಕೆ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಬೆಂಬಲವಿದೆ ಎಂದು ತಿಳಿಸಿದರು.
ಮೊದಲ ಹಂತದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಬೇಡಿಕೆ ಈಡೇರದೆ ಇದ್ದರೆ ಲಿಂಗನಮಕ್ಕಿ ಜಲಾಶಯಕ್ಕೆ ಮುತ್ತಿಗೆ ಹಾಕುತ್ತೇವೆ. ಆ ಬಳಿಕ ಜೋಗದಲ್ಲಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ಮುತ್ತಿಗೆ ಹಾಕಿ ವಿದ್ಯುತ್ ಸ್ಥಗಿತಗೊಳಿಸುತ್ತೇವೆ.
ಕೆ.ಎಂ.ಹೂವಪ್ಪ , ಜಿಲ್ಲಾ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಅಧ್ಯಕ್ಷ
ರೈತರಿಗೆ ಹಕ್ಕು ಪತ್ರ ನೀಡಲು ಸಾಧ್ಯವಾಗದೆ ಇದ್ದರೆ ಲಿಂಗನಮಕ್ಕಿ ಜಲಾಶಯವನ್ನು ಸರ್ಕಾರವೆ ಒಡೆದು ಹಾಕಲಿ. ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ನಿಮ್ಮ ಸರ್ಕರವೆ ನಮಗೆ ಬೇಡ. ಮಲೆನಾಡು ಭಾಗವನ್ನು ಪ್ರತ್ಯೇಕ ರಾಜ್ಯ ಮಾಡಲಿ.
ತೀ.ನಾ.ಶ್ರೀನಿವಾಸ್, ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ
ಸುದ್ದಿಗೋಷ್ಠಿಯಲ್ಲಿ ಎಂ.ಡಿ.ನಾಗರಾಜ್, ಪ್ರಮೋದ್, ರಾಘವೇಂದ್ರ ಇದ್ದರು.
ಇದನ್ನೂ ಓದಿ » ಲಕ್ಕಿನಕೊಪ್ಪದಲ್ಲಿ ಕೋಡಿ ಬಿದ್ದ ಕೆರೆ, ಕೊಚ್ಚಿ ಹೋದ ರಸ್ತೆ ಪಕ್ಕದ ಮಣ್ಣು, ಜಮೀನಿಗೆ ನೀರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200