ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ 7 ಮಂದಿಯೂ ಬಾಂಗ್ಲಾ ನಿವಾಸಿಗಳೆ, ಬೆಂಗಳೂರಿಗೆ ರವಾನೆ

SHIMOGA NEWS, 20 OCTOBER 2024 : ನಗರದಲ್ಲಿ ವಶಕ್ಕೆ ಪಡೆಯಲಾದ ಏಳು ಮಂದಿಯು ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದರು ಎಂಬುದು ದೃಢವಾಗಿದೆ. ಇವರು ಬಾಂಗ್ಲಾದೇಶದ (Bangla) ಪ್ರಜೆಗಳು ಎಂಬುದು ವಿಚಾರಣೆ ವೇಳೆ ಖಚಿತಗೊಂಡಿದೆ. ಹಾಗಾಗಿ ಬೆಂಗಳೂರಿನಲ್ಲಿರುವ ಅಕ್ರಮ ವಲಿಸಿಗರ ಬಂಧನ ಕೇಂದ್ರಕ್ಕೆ ರವಾನಿಸಲಾಗಿದೆ.

ಜಯನಗರ ಪೊಲೀಸರ ಕಾರ್ಯಾಚರಣೆ

ಸವಳಂಗ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ, ಬಾಂಗ್ಲಾದೇಶದ ಪ್ರಜೆಗಳು ಎಂಬ ಶಂಕೆ ವ್ಯಕ್ತವಾಗಿತ್ತು. ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ಅವರು ಅಕ್ರಮ ನಿವಾಸಿಗಳು ಎಂದು ಖಚಿತವಾಗಿತ್ತು.

ನಕಲಿ ಗುರುತು ಚೀಟಿ ಹೊಂದಿದ್ದರು

ಅಕ್ರಮ ನಿವಾಸಿಗಳು ಕಳೆದ ಒಂದೆರಡು ತಿಂಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದರು. ವಿವಿಧೆಡೆ ಕೂಲಿ ಕೆಲಸದಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾದ ಮೊಮಿನ್, ಅಶ್ರಫುಲ್ಲಾ, ಜೊವಾರುಲ್ಲಾ, ನಸೀಮ್, ರೆಹಮಾನ್, ಅಮಿನುಲ್, ಮತಿನ್, ಜೋಲಿನ್ ಎಂಬುವವರನ್ನು ವಶಕ್ಕೆ ಪಡೆದ ವಿಚಾರಣೆ ನಡೆಸಿದಾಗ ನಕಲಿ ಗುರುತು ಚೀಟಿ ಹೊಂದಿರುವುದು ಪತ್ತೆಯಾಗಿತ್ತು.

140823-Jayanagara-Police-Station

ಬೆಂಗಳೂರಿನ ವಲಸಿಗರ ಕ್ಯಾಂಪ್‌ಗೆ ರವಾನೆ

ಆರು ಮಂದಿ ಅಕ್ರಮ ವಲಸಿಗರನ್ನು ಬೆಂಗಳೂರಿನ ನೆಲಮಂಗಲದ ಸೊಂಡೆಕೊಪ್ಪದಲ್ಲಿರುವ ಅಕ್ರಮ ವಲಸಿಗರ ಬಂಧನ ಕೇಂದ್ರಕ್ಕೆ ರವಾನಿಸಲಾಗಿದೆ. ಇಲ್ಲಿ ವಿಚಾರಣೆ ವೇಳೆ ರಸ್ತೆ ಮೂಲಕ ಭಾರತಕ್ಕೆ ಬಂದಿದ್ದು, ನಕಲಿ ಗುರುತು ಚೀಟಿಯನ್ನು ಹೊಂದಿರುವುದನ್ನು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Kalleshwara-Enterprises.webp

ಇದನ್ನೂ ಓದಿ » ‘ಲಿಂಗನಮಕ್ಕಿ ಡ್ಯಾಮ್‌ಗೆ ಮುತ್ತಿಗೆ ಹಾಕ್ತೀವಿ, ವಿದ್ಯುತ್‌ ಉತ್ಪಾದನೆ ತಡೆಯುತ್ತೇವೆʼ

ಬಾಂಗ್ಲಾದೇಶದ ನಿವಾಸಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ ವಿವಿಧೆಡೆ ತಲೆಮರೆಸಿಕೊಳ್ಳುತ್ತಿದ್ದಾರೆ. ಕೃಷಿ ಕಾರ್ಮಿಕರಾಗಿ, ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ನುಸುಳುಕೋರರಿಗೆ ಭಾರತದ ಪ್ರಜೆಗಳು ಎಂದು ನಕಲು ಗುರುತು ಚೀಟಿ ನೀಡಲಾಗುತ್ತಿದೆ. ಇದನ್ನು ನಿರ್ವಹಿಸುವ ದಂಧೆಕೋರರು ಬಾಂಗ್ಲಾದೇಶಕ್ಕೆ ಹೊಂದಿಕೊಂಡ ಭಾರತದಲ್ಲಿ ಗಡಿಭಾಗದಲ್ಲಿದ್ದಾರೆ. ಈ ನುಸುಳುಕೋರರು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment