SHIMOGA NEWS, 21 OCTOBER 2024 : ಕಳೆದ ಎರಡು ದಿನದಿಂದ ಸುರಿಯುತ್ತಿರುವ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಸೇತುವೆ (Bridge) ಮೇಲೆ ನೀರು ಹರಿಯುತ್ತಿದೆ. ಹಾಗಾಗಿ ಯಡವಾಲ – ಹಿಟ್ಟೂರು ರಸ್ತೆ ಸಂಚಾರ ಬಂದ್ ಮಾಡಲಾಗಿದೆ. 10 ದಿನದ ಹಿಂದೆ ಇದೇ ಸೇತುವೆ ದಾಟುವಾಗ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದರು.
ಯಡವಾಲ – ಹಿಟ್ಟೂರು ಮಾರ್ಗದ ಸೇತುವೆ ಮೇಲೆ ರಭಸವಾಗಿ ನೀರು ಹರಿಯುತ್ತಿದೆ. ಇದೇ ಕಾರಣಕ್ಕೆ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಪೊಲೀಸರು ಬ್ಯಾರಿಕೇಡ್ ಇರಿಸಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಯಡವಾಲದಿಂದ ಹಾರನಹಳ್ಳಿ, ಸವಳಂಗ ಕಡೆಗೆ ತೆರಳುವವರು ಈಗ ಮುದುವಾಲ ಮೂಲಕ ಸಂಚರಿಸಬೇಕಾಗುತ್ತದೆ. (ಫೋಟೊ, ಮಾಹಿತಿ : ಪ್ರವೀಣ್ ಯಡವಾಲ)
![]() |
ಇದನ್ನೂ ಓದಿ » ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತ, ಸ್ಥಳಕ್ಕೆ ಸಂಸದ ಭೇಟಿ
ಇದೇ ಸೇತುವೆ ದಾಟುವಾಗ ಅ.9ರಂದು ನ್ಯಾಮತಿಯ ಇಕ್ಬಾಲ್ ಎಂಬುವವರು ಬೈಕ್ ಸಹಿತ ಕೊಚ್ಚಿ ಹೋಗಿದ್ದರು. ಎರಡು ದಿನದ ಬಳಿಕ ಅವರ ಮೃತದೇಹ ಪತ್ತೆಯಾಗಿತ್ತು.
ಕೋಡಿ ಬಿದ್ದ ಕೆರೆ
ಇನ್ನೊಂದೆಡೆ ಇಲ್ಲಿನ ಹಾರುವಿನ ಕೆರೆ ಕೋಡಿ ಬಿದ್ದಿದೆ. ಬಹಳ ಸಮಯದ ಬಳಿಕ ಕೆರೆ ತುಂಬಿ ನೀರು ಹೊರಗೆ ಹರಿಯುತ್ತಿದೆ. ಇದನ್ನು ನೋಡಲು ಗ್ರಾಮಸ್ಥರು ಕೆರೆ ಬಳಿ ಧಾವಿಸಿದ್ದಾರೆ. ಫೋಟೊ, ವಿಡಿಯೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200