THIRTHAHALLI NEWS, 23 OCTOBER 2024 : ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ, ಚುನಾವಣೆಗು (Election) ಮೊದಲೇ ಕಾಂಗ್ರೆಸ್ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಣ್ಣಿಸಿದ್ದಾರೆ.
ಈ ಸಂಬಂಧ ಆರಗ ಜ್ಞಾನೇಂದ್ರ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
![]() |
ಚುನಾವಣೆಗು ಮೊದಲೇ ಕಾಂಗ್ರೆಸ್ ಪಕ್ಷ ಸೋಲೊಪ್ಪಿಕೊಂಡಿದೆ. ಶತಮಾನದಷ್ಟು ಇತಿಹಾಸ ಇರುವ ಪಕ್ಷಕ್ಕೆ ಚುನಾವಣೆಗೆ ನಿಲ್ಲಿಸಲು ಒಬ್ಬ ಅಭ್ಯರ್ಥಿಯು ಸಿಕ್ಕಿಲ್ಲ. ಆದ್ದರಿಂದ ಬೇರೆ ಪಕ್ಷದಿಂದ ಕರೆತಂದು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೆ ಅವಮಾನ. ಬಿಜೆಪಿ – ಜೆಡಿಎಸ್ ಪಕ್ಷಗಳನ್ನು ಎದುರಿಸುವ ಸಾಮರ್ಥ್ಯವನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ. ಹಾಗಾಗಿ ಮೂರು ಕಡೆ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಗೆಲ್ಲಲಿದೆ.
ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಶಾಸಕ
ಇದನ್ನೂ ಓದಿ » ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200