ಚಂದ್ರಗುತ್ತಿಯಲ್ಲಿ 8 ವರ್ಷದ ಬಳಿಕ ಆಭರಣ ಎಣಿಕೆ, ಕೆ.ಜಿಗಟ್ಟಲೆ ಚಿನ್ನ, ಬೆಳ್ಳಿ ಸಂಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA NEWS, 30 OCTOBER 2024 : ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದ ಹುಂಡಿಯಲ್ಲಿನ ಒಡವೆಗಳ (Jewels) ಮೌಲ್ಯಮಾಪನಾ ನಡೆದಿದ್ದು 1 ಕೆ.ಜಿ.752 ಗ್ರಾಂ ಬಂಗಾರ, 121 ಕೆ.ಜಿ. 480 ಗ್ರಾಂ ಬೆಳ್ಳಿ, 3.60 ಕೆ.ಜಿ ಪಂಚಲೋಹದ ವಸ್ತುಗಳು ಸಂಗ್ರಹವಾಗಿವೆ.

ಹರಕೆ ಹಾಗೂ ಕಾಣಿಕೆ ರೂಪದಲ್ಲಿ ಭಕ್ತರು ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿಯ ಒಡವೆ ಮತ್ತು ನಾಣ್ಯಗಳ ಎಣಿಕೆ ಕಾರ್ಯ ರೇಣುಕಾಂಬಾ ಸಭಾ ಭವನದಲ್ಲಿ ಮಂಗಳವಾರ ನಡೆಯಿತು. ಸಾಗರ ಉಪವಿಭಾಗಾಧಿಕಾರಿ ಡಾ. ಯತೀಶ್ ಸಮ್ಮುಖದಲ್ಲಿ ಎಣಿಕೆ ಮಾಡಲಾಯಿತು.

8 ವರ್ಷದ ಬಳಿಕ ಒಡವೆ ಎಣಿಕೆ

8 ವರ್ಷದ ಬಳಿಕ ಕಾಣಿಕೆ ರೂಪದ ಒಡವೆಗಳ ಎಣಿಕೆ ಕಾರ್ಯ ನಡೆದಿದ್ದು ಭಕ್ತರು ದೇವಿಗೆ ಹರಕೆ ಸಲ್ಲಿಸುವಾಗ ಒಡವೆಯನ್ನು ಹೆಸರಿಸಿ ರಸೀದಿ ಪಡೆದಿದ್ದು ಅವುಗಳ ಕ್ರಮ ಸಂಖ್ಯೆಯ ಆಧಾರದ ಮೇಲೆ ಎಣಿಕೆ ಮಾಡಲಾಯಿತು. ಕೆಲವರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಹಾಕಿದ ಹಣದ ಎಣಿಕೆಯೂ ನಡೆಯಿತು.

Chandragutti-Temple-Soraba.

ಭಕ್ತರು ಏನೇನೆಲ್ಲ ಅರ್ಪಿಸಿದ್ದರು?

ಭಕ್ತರು ಬೆಳ್ಳಿಯ ತಂಬಿಗೆ, ವಿವಿಧ ರೂಪದ ಬೆಳ್ಳಿಯ ದೀಪ, ದೇವಿಯ ಮುಖವಾಡ, ಬಂಗಾರದ ಓಲೆ, ಬೇವಿನ ಗುಂಡಿನ ಸರ, ರಿಂಗ್‌ಗಳು, ಚೈನ್ ಸೇರಿದಂತೆ ವಿವಿಧ ರೀತಿಯ ಒಡವೆಗಳನ್ನು ಸಲ್ಲಿಸಿದ್ದರು. ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮರಾ ಆಳವಡಿಸಲಾಗಿತ್ತು.

ಇದನ್ನೂ ಓದಿ » ಫೋನ್‌ ಪೇ ಹೆಸರಲ್ಲಿ ಬಂತು ಮೆಸೇಜ್‌, ಕ್ಲಿಕ್‌ ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್

ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮೀಳಾ, ಶಿರಸ್ತೇದಾ‌ರ್ ಎಸ್.ನಿರ್ಮಲಾ, ತಹಸೀಲ್ದಾ‌ರ್ ಮಂಜುಳಾ, ನಾಡಕಚೇರಿ ಉಪ ತಹಸೀಲ್ದಾ‌ರ್ ಲಲಿತಾ, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ.ಶೃತಿ ಹಾಗೂ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment