ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RAILWAY NEWS, 3 NOVEMBER 2024 : ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ನಾಲ್ಕು ರೈಲುಗಳು (Trains) ಸಂಚರಿಸುತ್ತವೆ. ಈ ರೈಲುಗಳು ಸಾಮಾನ್ಯವಾಗಿ ಭರ್ತಿಯಾಗಿಯೇ ಸಂಚರಿಸುತ್ತವೆ.
ಯಾವ್ಯಾವ Trains, ಎಷ್ಟೊತ್ತಿಗೆ ಹೊರಡುತ್ತೆ?
♦ ಬೆಳಗ್ಗೆ 5.15ಕ್ಕೆ ಜನಶತಾಬ್ದಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣ ತಲುಪಲಿದೆ. ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ.
♦ ಬೆಳಗ್ಗೆ 7.15ಕ್ಕೆ ಇಂಟರ್ ಸಿಟಿ ರೈಲು ಶಿವಮೊಗ್ಗದಿಂದ ಹೊರಟು ಬೆಳಗ್ಗೆ 11.55ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣ ತಲುಪಲಿದೆ. ಈ ರೈಲು ಬೆಳಗ್ಗೆ 5.15ಕ್ಕೆ ತಾಳಗುಪ್ಪ ನಿಲ್ದಾಣದ ಹೊರಡಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಮಹಾದೇವಿ ಟಾಕೀಸ್ ಬಳಿ ನಿಲ್ದಾಣ, ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು, ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ.

♦ ಮಧ್ಯಾಹ್ನ 3.45ಕ್ಕೆ ಇಂಟರ್ಸಿಟಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ರಾತ್ರಿ 8.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರಿನಲ್ಲಿ ನಿಲುಗಡೆ ನೀಡಲಿದೆ.
ಇದನ್ನೂ ಓದಿ » ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್ ಸೇರ್ಪಡೆ
♦ ರಾತ್ರಿ 10.55ಕ್ಕೆ ತಾಳಗುಪ್ಪ ಮೈಸೂರು ಎಕ್ಸ್ಪ್ರೆಸ್ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಮಹಾದೇವಿ ಟಾಕೀಸ್ ಬಳಿ ನಿಲ್ದಾಣ, ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು , ಯಶವಂತಪುರ, ಮಲ್ಲೇಶ್ವರಂನಲ್ಲಿ ನಿಲುಗಡೆ ನೀಡಲಿದೆ.

ವಾರದಲ್ಲಿ ಮೂರು ದಿನ
♦ ರಾತ್ರಿ 11.55ಕ್ಕೆ ಎಕ್ಸ್ಪ್ರೆಸ್ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ 5 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರಿನಲ್ಲಿ ನಿಲುಗಡೆ ನೀಡಲಿದೆ. ಈ ರೈಲು ಭಾನುವಾರ, ಮಂಗಳವಾರ, ಗುರುವಾರ ಮಾತ್ರ ಚಲಿಸಲಿದೆ.
ವಾರಕ್ಕೆ ಒಮ್ಮೆ ಮಾತ್ರ
♦ ಸಂಜೆ 5.15ಕ್ಕೆ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಶಿವಮೊಗ್ಗದಿಂದ ಹೊರಟು ರಾತ್ರಿ 10.20ಕ್ಕೆ ಬೆಂಗಳೂರು ತಲುಪಲಿದೆ. ಈ ರೈಲು ಚೆನ್ನೈ ಎಂಜಿಆರ್ ನಿಲ್ದಾಣಕ್ಕೆ ತೆರಳಲಿದೆ. ಪ್ರತಿ ಶನಿವಾರ ಮಾತ್ರ ಈ ರೈಲು ಚಲಿಸಲಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















