HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.
ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
![]() |
ಶತಾಯುಷಿಯ ಸ್ವಾಭಿಮಾನದ ಬದುಕು
ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಅವರು ಮೀನಜ್ಜ ಎಂದು ಸುತ್ತಮುತ್ತಲು ಚಿರಪರಿಚಿತರಾಗಿದ್ದರು. ಹುಲಿಕಲ್ನಲ್ಲಿ ತಾವೇ ನಿರ್ಮಿಸಿದ್ದ ಶೆಡ್ನಲ್ಲಿ ವಾಸವಾಗಿದ್ದರು. 102 ವರ್ಷವಾಗಿದ್ದರು ಗಟ್ಟಿಮುಟ್ಟಾಗಿದ್ದರು. ಯಾರನ್ನು ಅವಲಂಬಿಸದೆ ಸ್ವಾಭಿಮಾನದಿಂದ ಬದುಕು ನಡೆಸುತ್ತಿದ್ದರು.
ಘಟನೆ ಸಂಬಂದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200