ಜಮೀರ್‌ ರಾಜೀನಾಮೆಗೆ ಒತ್ತಾಯ, ಶಿವಮೊಗ್ಗದಲ್ಲಿ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 16 NOVEMBER 2024 : ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದು ನಿಂದಿಸಿದ ಜಮೀರ್‌ ಅಹಮದ್‌ ಖಾನ್‌ ಅವರನ್ನು ತಕ್ಷಣವೆ ಸಂಪುಟದಿಂದ (Cabinet) ಕೈಬಿಡಬೇಕು. ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಜಮೀರ್‌ ಅಹಮದ್‌ ಅವರು ನಿಂದಿಸಿದ್ದಾರೆ. ಜಮೀರ್‌ ಅಹಮದ್‌ ಹೇಳಿಕೆ ರಾಜ್ಯವೇ ತಲೆತಗ್ಗಿಸುವಂತಾಗಿದೆ. ಆದ್ದರಿಂದ ಕೂಡಲೆ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Jds-protest-against-zameer-ahmed-in-shimoga.

ಇದನ್ನೂ ಓದಿ » ಸರ್ಕಾರಿ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಬಾಲಕ ಸಾವು

ಜೆಡಿಎಸ್‌ ಜಿಲ್ಲಾಧ್ಯಕ್ಷ ಡಾ. ಕಡಿದಾಳ್‌ ಗೋಪಾಲ್‌, ಶಾಸಕಿ ಶಾರದಾ ಪೂರ್ಯಾನಾಯ್ಕ್‌, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿ, ಪ್ರಮುಖರಾದ ಕೆ.ಎನ್.ರಾಮಕೃಷ್ಣ, ನರಸಿಂಹ ಗಂಧದಮನೆ, ಹೆಚ್‌.ಎಂ.ಸಂಗಯ್ಯ, ಸಂಜಯ್‌ ಕಶ್ಯಪ್‌ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment