ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA NEWS, 18 NOVEMBER 2024 : ಚಾಮರಾಜನಗರದಿಂದ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ (Tour) ತೆರಳುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 29 ಮಂದಿ ಗಾಯಗೊಂಡಿದ್ದಾರೆ.
ಹೊಸನಗರ ತಾಲೂಕು ಮಂಡಳ್ಳಿ ಸಮೀಪ ನರ್ತಿಗೆ ಬಳಿ ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಆಳಂದೂರಿನ ಎಸ್ಡಿವಿಎಸ್ ಶಾಲೆಯ ಮಕ್ಕಳು ಪ್ರವಾಸಕ್ಕೆ ತೆರಳುತ್ತಿದ್ದರು. ನರ್ತಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.

ವಿಚಾರ ತಿಳಿದು ಸ್ಥಳೀಯರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ನಗರ, ಹೊಸನಗರದ ಆಸ್ಪತ್ರೆಗಳು ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಗಾಯಗೊಂಡು ಆತಂಕಕ್ಕೀಡಾಗಿದ್ದ ಮಕ್ಕಳು, ಶಿಕ್ಷಕರಿಗೆ ಸ್ಥಳೀಯರು ಧೈರ್ಯ ತುಂಬಿದ್ದಾರೆ. ಊಟದ ವ್ಯವಸ್ಥೆಯನ್ನೂ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ » ತುಂಗಭದ್ರ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





