ಶಾಲಾ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOSANAGARA NEWS, 18 NOVEMBER 2024 : ಚಾಮರಾಜನಗರದಿಂದ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ (Tour) ತೆರಳುತ್ತಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 29 ಮಂದಿ ಗಾಯಗೊಂಡಿದ್ದಾರೆ.

ಹೊಸನಗರ ತಾಲೂಕು ಮಂಡಳ್ಳಿ ಸಮೀಪ ನರ್ತಿಗೆ ಬಳಿ ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಆಳಂದೂರಿನ ಎಸ್‌ಡಿವಿಎಸ್‌ ಶಾಲೆಯ ಮಕ್ಕಳು ಪ್ರವಾಸಕ್ಕೆ ತೆರಳುತ್ತಿದ್ದರು. ನರ್ತಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ.

Chamarajanagara-Tour-Bus-mishap-at-hosanagara

ವಿಚಾರ ತಿಳಿದು ಸ್ಥಳೀಯರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ನಗರ, ಹೊಸನಗರದ ಆಸ್ಪತ್ರೆಗಳು ಮತ್ತು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಗಾಯಗೊಂಡು ಆತಂಕಕ್ಕೀಡಾಗಿದ್ದ ಮಕ್ಕಳು, ಶಿಕ್ಷಕರಿಗೆ ಸ್ಥಳೀಯರು ಧೈರ್ಯ ತುಂಬಿದ್ದಾರೆ. ಊಟದ ವ್ಯವಸ್ಥೆಯನ್ನೂ ಮಾಡಿ ಮಾನವೀಯತೆ ಮೆರೆದಿದ್ದಾರೆ.

8-YEAR-PROMO-IMAGE2-FOREIGN

ಇದನ್ನೂ ಓದಿ » ತುಂಗಭದ್ರ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment