THIRTHAHALLI NEWS, 18 NOVEMBER 2024 : ನದಿಗೆ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು 112 ಪೊಲೀಸ್ ಸಿಬ್ಬಂದಿ ರಕ್ಷಣೆ (Rescue) ಮಾಡಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಸುಮಾರು ಒಂದು ಕಿ.ಮೀ ದೂರದವರೆಗೆ ಆತನನ್ನು ಹೊತ್ತು ತಂದು, ಬಳಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ತೀರ್ಥಹಳ್ಳಿಯ ಸಂಕದಹೊಳೆ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬ ಬಿದ್ದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ 112 ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ನದಿಗೆ ಇಳಿದ ಪೊಲೀಸ್ ಸಿಬ್ಬಂದಿ ಲೋಕೇಶ್ ಮತ್ತು ಸಾದತ್, ಅನಾಮಧೇಯ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಸುಮಾರು ಒಂದು ಕಿ.ಮೀ ದೂರದವರೆಗೆ ಸ್ಥಳೀಯರ ನೆರವಿನಲ್ಲಿ ಅತನನ್ನು ಹೊತ್ತು ಸಾಗಿದ್ದರೆ. ಪೊಲೀಸ್ ವಾಹನದಲ್ಲಿ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
![]() |
ಇದನ್ನೂ ಓದಿ » ತುಂಗಭದ್ರ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ
ವ್ಯಕ್ತಿಯ ಕುರಿತು ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸ್ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200