ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 20 NOVEMBER 2024 : ಮೈಸೂರು (Mysore) ಮೂಲದ ವ್ಯಕ್ತಿಯೊಬ್ಬರು ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೈಸೂರಿನ ವಿಜಯನಗರ ನಿವಾಸಿ ರವಿಕುಮಾರ್ ನ.17ರ ರಾತ್ರಿ ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ತರಕಾರಿ ಮಂಡಿ ನಡೆಸುತ್ತಿದ್ದ ರವಿಕುಮಾರ್ ಖಾಸಗಿ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದರು. ದಿನದ ಬಡ್ಡಿ ಮತ್ತು ಹಣ ಮರುಪಾವತಿಗಾಗಿ ಬ್ಯಾಂಕ್ ಮ್ಯಾನೇಜರ್, ರಿಕವರಿ ಏಜೆಂಟ್ಗಳು, ಖಾಸಗಿ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ಗಾಗಿ ಶೋಧ
ವಿಷಯ ತಿಳಿದು ರವಿಕುಮಾರ್ ಅವರ ಕುಟುಂಬದವರು ಮೈಸೂರಿನಿಂದ ಆಗಮಿಸಿ ಮೃತದೇಹ ಕೊಂಡೊಯ್ದಿದ್ದಾರೆ. ಘಟನೆ ಸಂಬಂಧ ನಾಲ್ವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು















