ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಬೆಂಕಿ, ಲಕ್ಷ ಲಕ್ಷದ ವಸ್ತುಗಳು ಆಹುತಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA NEWS, 26 NOVEMBER 2024
➤ ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ಹೈಲೈಟ್‌ ಪಾಯಿಂಟ್ಸ್‌

» ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಅಗ್ನಿ ಅವಘಡ

» ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಆಹುತಿ

» ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಶಿವಮೊಗ್ಗ : ಗಾಂಧಿ ಬಜಾರ್‌ನ ಜೈ ಅಂಬೆ ಮಾರ್ಕೆಟಿಂಗ್‌ ಅಂಗಡಿಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 6 ಲಕ್ಷ ರೂ. ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಗಾಂಧಿ ಬಜಾರ್‌ 1ನೇ ಅಡ್ಡರಸ್ತೆಯಲ್ಲಿರುವ ಜೈ ಅಂಬೆ ಮಾರ್ಕೆಟಿಂಗ್‌ ಸಂಸ್ಥೆಯಲ್ಲಿ ಗ್ಯಾಸ್‌ ಸ್ಟೌ, ಫ್ಯಾನ್‌ಗಳು ಸೇರಿದಂತೆ ವಿವಿಧ ಉಪಕರಣ ಮಾರಾಟ ಮಾಡಲಾಗುತ್ತಿತ್ತು. ಕಳೆದ ರಾತ್ರಿ ಅಂಗಡಿಯ ಮೇಲ್ಭಾಗದ ಗೋಡೋನ್‌ನಲ್ಲಿ ಧಿಡೀರ್‌ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ ಹಲವು ವಸ್ತುಗಳು ಸುಟ್ಟು ಹೋಗಿವೆ.

ಇದನ್ನೂ ಓದಿ » ಮಾಟ, ಮಂತ್ರ, ಈ ಬಾಕ್ಸ್‌ ತೆಗೆದರೆ ಸತ್ತೇ ಹೋಗ್ತೀರ, ನಂಬಿದ ಕುಟುಂಬಕ್ಕೆ ಕಾದಿತ್ತು ಆಘಾತ

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

Gandhi-Bazaar-shop-incident.

Gandhi-Bazaar-shop-incident.

Shop

Leave a Comment