ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 DECEMBER 2024
ಶಿವಮೊಗ್ಗ : ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ (BAG) ಕಂತೆ ಕಂತೆ ಹಣ ಕಳ್ಳತನ ಮಾಡಲಾಗಿದೆ. ಮನೆ ಕಟ್ಟಲು ಬ್ಯಾಂಕ್ನಿಂದ ಹಣ ಬಿಡಿಸಿಕೊಂಡು ಚನ್ನಗಿರಿಯ ತಮ್ಮೂರಿಗೆ ಕೊಂಡೊಯ್ಯುತ್ತಿರುವಾಗ ಘಟನೆ ಸಂಭವಿಸಿದೆ.
ಚನ್ನಗಿರಿಯ ಚಿಕ್ಕಮ್ಮ ಎಂಬುವವರಿಗೆ ಸೇರಿದ 1.50 ಲಕ್ಷ ರೂ. ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಚಿಕ್ಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿ 2.19 ಲಕ್ಷ ರೂ. ಹಣವಿತ್ತು.

ಘಟನೆ ಸಂಭವಿಸಿದ್ದು ಹೇಗೆ?
ಚಿಕ್ಕಮ್ಮ ಚನ್ನಗಿರಿಯಲ್ಲಿ ಮನೆ ಕಟ್ಟಸುವ ಸಲುವಾಗಿ ತಾವು ಉಳಿತಾಯ ಮಾಡಿದ್ದ ಹಣವನ್ನು ಶಿವಮೊಗ್ಗದ ಬ್ಯಾಂಕಿನಲ್ಲಿ ಬಿಡಿಸಿಕಂಡಿದ್ದರು. ಇದಕ್ಕಾಗಿ ತಮ್ಮ ಪುತ್ರನೊಂದಿಗೆ ಚನ್ನಗಿರಿಯಿಂದ ಶಿವಮೊಗ್ಗಕ್ಕೆ ಬಂದಿದ್ದರು. ಹಣ ಬಿಡಿಸಿಕೊಂಡು ಇಬ್ಬರು ಖಾಸಗಿ ಬಸ್ಸಿನಲ್ಲಿ ಚನ್ನಗಿರಿಗೆ ತೆರಳುತ್ತಿದ್ದರು. ಬಸ್ಸು ಹೊಳೆಬೆನವಳ್ಳಿ ಬಳಿ ಹೋಗುತ್ತಿದ್ದಾಗ ಚಿಕ್ಕಮ್ಮ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಮೂರು ಕಂತೆ ಹಣ ನಾಪತ್ತೆಯಾಗಿತ್ತು.
ಇದನ್ನೂ ಓದಿ » ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ IAS ಅಧಿಕಾರಿ, ತಕ್ಷಣ ಆರೈಕೆ ಮಾಡಿದ ಡಾ.ಸರ್ಜಿ
ಕುಟುಂಬದವರಿಗೆ ವಿಷಯ ತಿಳಿಸಿದ ಬಳಿಕ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು














