ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE CITY NEWS, 5 DECEMBER 2024

ಶಿವಮೊಗ್ಗ : ಇಡೀ ದಿನ ನಗರದಲ್ಲಿ ಏನೇನಾಯ್ತು. ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌.

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಲೋಕಾಯುಕ್ತ ಪರಿಶೀಲನೆ

FATAFAT-NEWS-1ಮೆಗ್ಗಾನ್‌ ಆಸ್ಪತ್ರೆ : ಲೋಕಾಯುಕ್ತ ಪೊಲೀಸರು ಮೆಗ್ಗಾನ್‌ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಔಷಧ ಉಪ ಉಗ್ರಾಣ, ಮುಖ್ಯ ಉಗ್ರಾಣ ಮತ್ತು ಡಿಹೆಚ್‌ಒ ಕಚೇರಿಗೆ ಭೇಟಿ ನೀಡಿದ್ದರು. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಿಗೆ ಸರ್ಕಾರದ ಆದೇಶದ ಮೇರೆಗೆ ಈ ಪರಿಶೀಲನೆ ನಡೆಯಿತು.

ಇದನ್ನೂ ಓದಿ : ವಿಐಎಸ್‌ಎಲ್‌, ಭದ್ರಾವತಿಯಲ್ಲಿ ಬಿ.ವಿ.ಶ್ರೀನಿವಾಸ್‌ಗೆ ಮನವಿ

ಮೂರು ಶಾಖೆ ಆರಂಭ

FATAFAT-NEWS-2ಡಿಸಿಸಿ ಬ್ಯಾಂಕ್‌ : ಇದೇ ತಿಂಗಳು ಜಿಲ್ಲೆಯಲ್ಲಿ ಮೂರು ಹೊಸ ಶಾಖೆಗಳನ್ನು ಆರಂಭಿಸಲಾಗುತ್ತಿದೆ. ಇನ್ನು, ಬೆಳೆ ವಿಮೆ ನೀತಿ ಅವೈಜ್ಞಾನಿಕವಾಗಿದ್ದು ಪರಿಷ್ಕರಿಸಬೇಕು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ಆರ್‌.ಎಂ.ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ : ಡಿಸಿಸಿ ಬ್ಯಾಂಕ್‌ನಿಂದ ಮೂರು ಹೊಸ ಶಾಖೆ, ಎಲ್ಲೆಲ್ಲಿ? ಯಾವಾಗ ಆರಂಭ?

ಅಥ್ಲೆಟಿಕ್ಸ್‌ ಕ್ರೀಡಾಕೂಟಕ್ಕೆ ಚಾಲನೆ

FATAFAT-NEWS-3ನೆಹರು ಕ್ರೀಡಾಂಗಣ : ಡಿವಿಎಸ್‌ ಶಿಕ್ಷಣ ಸಂಸ್ಥೆ, ಕುವೆಂಪು ವಿಶ್ವವಿದ್ಯಾಲಯದ ಆ‍ಶ್ರಯದಲ್ಲಿ ಮೂರು ದಿನಗಳ ಅಥ್ಲೆಟಿಕ್ಸ್‌ ಕ್ರೀಡಾಕೂಟಕ್ಕೆ ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್‌.ಎಂ.ಗೋಪಿನಾಥ್‌ ಚಾಲನೆ ನೀಡಿದರು. ಮೂರು ದಿನ ವಿವಿಧ ವಿಭಾಗಗಳಲ್ಲಿ ಕ್ರೀಡಾಕೂಟ ನಡೆಯಲಿದೆ.

ಇದನ್ನೂ ಓದಿ : ‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ

Complete-Shivamogga
City News

ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ

FATAFAT-NEWS-4ಜಿಲ್ಲಾಧಿಕಾರಿ ಕಚೇರಿ : ಬೀದಿ ಬದಿ ವ್ಯಾಪಾರಸ್ಥರಿಗೆಂದೇ ಗುರುತಿಸಿದ ವ್ಯಾಪಾರದ ಜಾಗ, ಟಿವಿಸಿ ಕಮಿಟಿಯಲ್ಲಿ ಅನುಮೋದನೆಗೊಂಡ ವ್ಯಾಪಾರ ವಲಯಗಳನ್ನು ತಕ್ಷಣ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿ ಬೀದಿ ಬದಿ ವ್ಯಾಪಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ : ಸಿಲಿಂಡರ್‌ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

ಸಹ್ಯಾದ್ರಿ ಕಾಲೇಜಿನಲ್ಲಿ ಕಾರ್ಯಾಗಾರ

FATAFAT-NEWS-5ಸಹ್ಯಾದ್ರಿ ಕಾಲೇಜು : ಹಿರಿಯ ವಿದ್ಯಾರ್ಥಿಗಳ ಸಂಘ, ಸಹ್ಯಾದ್ರಿ ಕಲಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಾಮರಾಜ ಒಡೆಯರ್‌ ಸಭಾಂಗಣದಲ್ಲಿ ಬೆಂಗಳೂರಿನ ಮಲೆನಾಡು ಕೋಚಿಂಗ್‌ ಸೆಂಟರ್‌ ಸಹಕಾರದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ನಡೆಸಲಾಯಿತು. ಮಾಜಿ ಸಂಸದ ಆಯನೂರು ಮಂಜುನಾಥ್‌ ಉದ್ಘಾಟಿಸಿದರು.

ಇದನ್ನೂ ಓದಿ : ಶಕ್ತಿ ಯೋಜನೆ, ಶಿವಮೊಗ್ಗದಲ್ಲಿ ಈವರೆಗೂ ಉಚಿತವಾಗಿ ಓಡಾಡಿದ ಮಹಿಳೆಯರೆಷ್ಟು?

ಶಿವಮೊಗ್ಗದಲ್ಲಿ ಪೊಲೀಸ್‌ ಕ್ರೀಡಾಕೂಟ

FATAFAT-NEWS-6ಡಿಎಆರ್‌ ಮೈದಾನ : ಜಿಲ್ಲಾ ಪೊಲೀಸ್‌ ಕ್ರೀಡಾಕೂಟಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌ ಚಾಲನೆ ನೀಡಿದರು. ಸಶಸ್ತ್ರ ಮೀಸಲು ಪಡೆ ಕವಾಯತ್‌ ಮೈದಾನದಲ್ಲಿ ವಿವಿಧ ಸ್ಪರ್ಧೆಗಳು ನಡೆದವು. ಎಲ್ಲ ತಾಲೂಕಿನ ಪೊಲೀಸರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಬೆಳೆ ವಿಮೆ, ಪರಿಷ್ಕರಣೆಗೆ ಆರ್‌ಎಂಎಂ ಆಗ್ರಹ, ಕಾರಣವೇನು?

ಸಾಧಕ ಮಹಿಳೆಯರಿಗೆ ಸನ್ಮಾನ

FATAFAT-NEWS-7.ಕೃಷಿ ಕಾಲೇಜು : ಕೃಷಿ ನಿರತ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧಕ ಮಹಿಳೆಯರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸನ್ಮಾನಿಸಲಾಯಿತು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಐಸಿಎಆರ್‌ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದನ್ನೂ ಓದಿ : ಅಡಿಕೆ ಧಾರಣೆ | 4 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ಏಡ್ಸ್‌ ದಿನಾಚರಣೆ ಜಾಥಾ

FATAFAT-NEWS-8ಶಿವಮೊಗ್ಗ : ಏಡ್ಸ್‌ ದಿನಾಚರಣೆ ಪ್ರಯುಕ್ತ ಜಿಲ್ಲಾ ಕೋರ್ಟ್‌ ಆವರಣದಿಂದ ಐಎಂಎ ಸಭಾಂಗಣದವರೆಗೆ ಜಾಥಾ ನಡೆಸಲಾಯಿತು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್‌ ನಾಯಕ್‌ ಜಾಥಾಗೆ ಚಾಲನೆ ನೀಡಿದರು.

Shimoga City news

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment