ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 5 DECEMBER 2024
ಶಿವಮೊಗ್ಗ : ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ (Hospital) ಭೇಟಿ ನೀಡಿ ವಿವಿಧೆಡೆ ಪರಿಶೀಲಿಸಿದರು. ಅಲ್ಲದೆ ಔಷಧಗಳ ಕುರಿತು ಮಾಹಿತಿ ಪಡೆದರು.
ಬಳ್ಳಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮೆಗ್ಗಾನ್ ಆಸ್ಪತ್ರೆ ಔಷಧ ಉಪ ಉಗ್ರಾಣ, ಮುಖ್ಯ ಉಗ್ರಾಣ ಮತ್ತು ಡಿಎಚ್ಒ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.

ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು. ಸರ್ಕಾರದ ಆದೇಶದ ಮೇರೆಗೆ ಮೆಗ್ಗಾನ್ ಆಸ್ಪತ್ರೆಯಲ್ಲೂ ರಿಂಗ್ಲಾಲ್ಯಾಕ್ವೆಡ್ ಫ್ಲಯ್ (ಗ್ಲುಕೋಸ್) ಬಳಸದೆ ತೆಗೆದಿಡಲಾಗಿದೆ. 1.10 ಲಕ್ಷ ರೂ. ಮೌಲ್ಯದ ಗ್ಲೂಕೋಸ್ ತರಿಸಿದ್ದು, ಅದರಲ್ಲಿ 48 ಸಾವಿರ ರೂ. ಮೌಲ್ಯದ ಗ್ಲೂಕೋಸ್ ಬಳಸದೆ ತೆಗೆದಿಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ
ಪಶ್ಚಿಮ ಬಂಗಾಳದಿಂದ ಪೂರೈಕೆ ಆಗುವ ಮೆಡಿಸಿನ್ಗನ್ನೂ ಬಳಸದಂತೆ ಲೋಕಾಯಕ್ತ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ತಪಾಸಣೆ ವೇಳೆ ಇನ್ಸ್ಪೆಕ್ಟರ್ ವೀರಬಸಪ್ಪ ಕುಸ್ಲಾಪುರ, ಮುಖ್ಯಪೇದೆ ಸುರೇಂದ್ರ, ಸಿಬ್ಬಂದಿ ಮಂಜುನಾಥ್, ಪ್ರಶಾಂತ್, ಪ್ರದೀಪ್, ಗಂಗಾಧರ್ ಇದ್ದರು.
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















