ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 15 DECEMBER 2024

ಶಿವಮೊಗ್ಗ : ನಗರದ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಾಣವಾಗಿರುವ ಮಲ್ಟಿ ಲೆವೆಲ್‌ ಪಾರ್ಕಿಂಗ್‌ (Parking) ಕಟ್ಟಡ ಧೂಳು ಹಿಡಿಯುತ್ತಿದೆ. ಉದ್ಘಾಟನೆಯಾಗಿ ವರ್ಷ ಕಳೆದರು ಇದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಲ್ಲ.

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿ.ಹೆಚ್.‌ರಸ್ತೆಯಲ್ಲಿದ್ದ ಹೂವಿನ ಮಾರುಕಟ್ಟೆ ಸ್ಥಳದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ವತಿಯಿಂದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟ ನಿರ್ಮಿಸಲಾಗಿದೆ. ಈ ಕಟ್ಟಡವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ.

Multi-level-car-parking-building-usage-delay

ಮತ್ತೊಮ್ಮೆ  ಜನವರಿ ಬಂದರೂ

25 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟಡ ನಿರ್ಮಿಸಲಾಗಿದೆ. ಈ ವರ್ಷದ ಜನವರಿಯಲ್ಲಿ ಸಚಿವ ಮಧು ಬಂಗಾರಪ್ಪ ಇದನ್ನು ಉದ್ಘಾಟಿಸಿದ್ದರು. ಮತ್ತೊಮ್ಮೆ ಜನವರಿ ತಿಂಗಳು ಬಂದರು ಕಾರ್‌ ಪಾರ್ಕಿಂಗ್‌ (Parking) ಕಟ್ಟಡದಲ್ಲಿ ಪಾರ್ಕಿಂಗ್‌ ಸೇವೆ ಆರಂಭವಾಗಿಲ್ಲ. ಹಾಗಾಗಿ ಕಟ್ಟಡ ನಿರ್ಮಾಣದ ಉದ್ದೇಶವೆ ಈಡೇರದೆ ಸಂಚಾರ ದಟ್ಟಣೆ ಮುಂದುವರೆದಿದೆ.

Multi-level-car-parking-building-usage-delay

ಇದು ಬರೀ  ಪಾರ್ಕಿಂಗ್‌  ಕಟ್ಟಡವಲ್ಲ

ವಿಶೇಷತೆ 1 : 10 ಸಾವಿರ ಚದರ ಅಡಿಯಲ್ಲಿ, ಬೇಸ್‌ಮೆಂಟ್‌ ಮತ್ತು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ.

ವಿಶೇಷತೆ 2 : ಬೇಸ್‌ಮೆಂಟ್‌ನಲ್ಲಿ ಬೈಕ್‌ ಪಾರ್ಕಿಂಗ್‌ಗೆ ಮೀಸಲು. 80 ಬೈಕುಗಳ ನಿಲುಗಡೆಗೆ ಅವಕಾಶವಿದೆ.

Multi-level-car-parking-building-usage-delay

ವಿಶೇಷತೆ 3 : ನೆಲ ಮಹಡಿಯಲ್ಲಿ 118 ಮಳಿಗೆ ನಿರ್ಮಿಸಲಾಗಿದೆ. ಪಾರ್ಕಿಂಗ್‌ ಕಟ್ಟಡದಲ್ಲಿ ಈ ಮೊದಲು ಇದ್ದ ಹೂವಿನ ವ್ಯಾಪಾರಿಗಳಿಗೆ ಮಳಿಗೆ ನೀಡುವ ಉದ್ದೇಶವಿದೆ.

ಇದನ್ನೂ ಓದಿ » ಶಿವಮೊಗ್ಗದ ಜನರೆ ಹುಷಾರ್‌, ಇಲ್ಲಿದೆ ಟಾಪ್‌ 5 ವಂಚನೆ ಲಿಸ್ಟ್‌, ಇವರ ಬಲೆಗೆ ಬಿದ್ದರೆ ಸಂಕಷ್ಟ ಫಿಕ್ಸ್‌

ವಿಶೇಷತೆ 4 : ಉಳಿದ ಮೂರು ಮಹಡಿಗಳಲ್ಲಿ ಕಾರುಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. 172 ಕಾರುಗಳ ನಿಲುಗಡೆಗೆ ಅವಕಾಶವಿದೆ.

ವಿಶೇಷತೆ 5 : ಈ ಕಟ್ಟಡಕ್ಕೆ ಎಲೆಕ್ಟ್ರಿಕ್‌ ಸಬ್‌ ಸ್ಟೇಷನ್‌ ನಿರ್ಮಿಸಲಾಗುತ್ತಿದೆ. ಎಲೆಕ್ಟ್ರಿಕ್‌ ಸೇಫ್ಟಿ ವ್ಯವಸ್ಥೆ ಮಾಡಲಾಗಿದೆ. ಇನ್ನು ತುರ್ತು ಸಂದರ್ಭ ಸ್ವಯಂ ಚಾಲಿತ ಸೆನ್ಸರ್‌ ಆಧಾರಿತ ಫೈರ್‌ ಸೇಫ್ಟಿ ಇದೆ. ಕಾರು ಪಾರ್ಕಿಂಗ್‌ ಮಾಡಿದವರು ಕಟ್ಟಡದ ಮೇಲೆ, ಕೆಳಗೆ ಹೋಗಿ ಬರಲು ಲಿಫ್ಟ್‌ ಮತ್ತು ಮೆಟ್ಟಿಲುಗಳ ವ್ಯವಸ್ಥೆಯಿದೆ.

BLACK-LINE

ಕಟ್ಟಡ ಬಳಕೆಯಾಗದೆ  ಏನೆಲ್ಲ ಸಮಸ್ಯೆ ಆಗ್ತಿದೆ?

ಸಮಸ್ಯೆ 1 : ಬಿ.ಹೆಚ್.ರಸ್ತೆ, ನೆಹರು ರಸ್ತೆಗಳಲ್ಲಿ ಕಾರ್‌ಗಳ ನಿಲುಗಡೆ ಸ್ಥಳಾವಕಾಶ ಸಿಗದೆ ಕಾರು ಚಾಲಕರು ಪರದಾಡುತ್ತಿದ್ದಾರೆ. ಅಡ್ಡದಿಡ್ಡಿ ಕಾರು ನಿಲ್ಲಿಸುವುದರಿಂದ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ.

Multi-level-car-parking-building-usage-delay

ಸಮಸ್ಯೆ 2 : ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆಯಲ್ಲಿ ಬೈಕುಗಳ ಪಾರ್ಕಿಂಗ್‌ಗೆ ಸೂಕ್ತ ಸ್ಥಳ ಸಿಗದೆ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ »  ಶಿವಮೊಗ್ಗದಲ್ಲಿ ಸೂಪರ್‌ ಮಾರ್ಕೆಟ್‌ಗಳ ಟ್ರೆಂಡ್‌ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?

ಸಮಸ್ಯೆ 3 : ಬಿ.ಹೆಚ್‌.ರಸ್ತೆಯಲ್ಲಿ ವೆಂಕಟೇ‍ಶ್ವರ ಸ್ವೀಟ್‌ ಹೌಸ್‌ ಮುಂಭಾಗ ರಸ್ತೆ ಕಿರಿದಾಗಿದೆ. ಇಲ್ಲಿ ನೋ ಪಾರ್ಕಿಂಗ್‌ ಜೋನ್‌ ಮಾಡಲಾಗಿತ್ತು. ಇದರಿಂದ ವಾಹನ ಸಂಚಾರ ಸುಗಮವಾಗಿತ್ತು. ಆದರೆ ಅನಿವಾರ್ಯ ಕಾರಣಕ್ಕೆ ಸಂಚಾರ ಪೊಲೀಸರು ಪುನಃ ಇಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್‌ಗೆ (Parking) ಅವಕಾಶ ನೀಡಬೇಕಾಯಿತು. ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ ಸಾರ್ವಜನಿಕ ಬಳಕೆಗೆ ಅವಕಾಶ ಕಲ್ಪಿಸಿದರೆ ಇದು ನೋ ಪಾರ್ಕಿಂಗ್‌ ಜೋನ್‌ ಆಗಲಿದೆ.

Multi-level-car-parking-building-usage-delay

ಸಮಸ್ಯೆ 4 : ಹೂವಿನ ವ್ಯಾಪಾರಿಗಳಿಗೆ ಖಾಸಗಿ ಬಸ್‌ ನಿಲ್ದಾಣದಲ್ಲಿ ಸ್ಥಳಾವಕಾಶವಿದೆ. ಆದರೆ ಅಲ್ಲಿಗೆ ಹೋಗುವ ಗ್ರಾಹಕರ ಸಂಖ್ಯೆ ಕಡಿಮೆ. ಇದೆ ಕಾರಣಕ್ಕೆ ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಮಳಿಗೆ ಹಾಕಿಕೊಂಡಿದ್ದಾರೆ. ಹಾಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

BLACK-LINE

ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡದಲ್ಲಿ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಿದರೆ ಹಲವು ಸಮಸ್ಯೆಗಳಿಗೆ ಒಟ್ಟಿಗೆ ಮುಕ್ತಿ ಸಿಗಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತು ಗಮನ ಹರಿಸಬೇಕಿದೆ.

(Parking)

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 15, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment