ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 24 DECEMBER 2024
ಶಿವಮೊಗ್ಗ : ಈ ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಇಂಡುವಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಈಶ್ವರಪ್ಪ ರೆಡ್ ಹ್ಯಾಂಡ್ (Red Hand) ಆಗಿ ಸಿಕ್ಕಿಬಿದ್ದಿದ್ದಾರೆ.
ಇಂಡುವಳ್ಳಿ ಗ್ರಾಮದ ಮೊಹಮ್ಮದ್ ಗೌಸ್ ಅವರ ತಂದೆ ಭಾಷಾ ಸಾಬ್ ಅವರ ಹೆಸರಿನಲ್ಲಿ ಜಮೀನಿನ ಈ ಸ್ವತ್ತು ಮಾಡಿಕೊಡಲು ಪಿಡಿಒ ಈಶ್ವರಪ್ಪ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮೊಹಮ್ಮದ್ ಗೌಸ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇವತ್ತು ಪಿಡಿಒ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಡಿಒ ಈಶ್ವರಪ್ಪನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್, ಸಿಬ್ಬಂದಿ ಯೋಗೇಶ್, ಮಂಜುನಾಥ್, ಸುರೇಂದ್ರ, ಪ್ರಕಾಶ್ ಕುಮಾರ್, ಚೆನ್ನೇಶ್, ದೇವರಾಜ್, ಅರುಣ್ ಕುಮಾರ್, ಅಂಜಲಿ, ಜಯಂತ್, ಪ್ರದೀಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್ ವಿಡಿಯೋ ರಿಲೀಸ್, ನೋಡಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















