‘ನನಗೆ ತೊಂದರೆ ಕೊಟ್ಟವರೆಲ್ಲ ಅನುಭವಿಸಿದ್ದಾರೆ, ಇನ್ಮುಂದೆಯು ಅನುಭವಿಸುತ್ತಾರೆʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 3 JANUARY 2024

ಶಿವಮೊಗ್ಗ : ತಮಗೆ ತೊಂದರೆ (Problem) ಕೊಟ್ಟವರೆಲ್ಲ ಅನುಭವಿಸಿದ್ದಾರೆ. ಇನ್ಮುಂದೆಯು ಅನುಭವಿಸುತ್ತಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ‍ಶ್ವರಪ್ಪ ನಾಲ್ಕು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.

ಈಶ್ವರಪ್ಪ ಏನೆಲ್ಲ ಹೇಳಿದರು?

#f1f1f1 - POINT 1ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು. ಹಿಂದಿನ ಸರ್ಕಾರ ಜಿಲ್ಲೆಗೊಂದು ಗೋ ಶಾಲೆ ಸ್ಥಾಪಿಸಬೇಕು. ಮದರಸ, ಉರ್ದು ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚುತ್ತೀರ?

KS-Eshwarappa-Press-meet-in-Shimoga

#f1f1f1 - POINT 2ಮೃತ್ಯುಂಜಯ ನದಿಗೆ ಗೋ ಮಾಂಸದ ತ್ಯಾಜ್ಯ ಹಾಕಲಾಗಿತ್ತು. ಈ ನೀರು ನೇತ್ರಾವತಿ ನದಿಗೆ ಸೇರಲಿದೆ. ಧರ್ಮಸ್ಥಳದಲ್ಲಿ ಪುಣ್ಯ ಸ್ನಾನವನ್ನು ಅಪವಿತ್ರಗೊಳಿಸುವ ಪ್ರಯತ್ನ ಇದು. ಗೋ ಹತ್ಯೆ ನಿಷೇಧವಿದ್ದರು ಇಷ್ಟೊಂದು ಗೋ ಮಾಂಸ ತ್ಯಾಜ್ಯ ಬಂದಿದ್ದು ಹೇಗೆ? ಹಿಂದು ಸಮಾಜಕ್ಕೆ ಮತ್ತು ನಂಬಿಕೆಗೆ ತೊಂದರೆ ಉಂಟು ಮಾಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿರೋದೇಕೆ?

Eshwarappa Press Meet

#f1f1f1 - POINT 3ಬಸ್‌ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. ಇದು ಸಾಲ ಮಾಡಿ ಹಬ್ಬದೂಟ ಮಾಡಿದಂತಾಗಿದೆ. ಸಾಲ ಮಾಡಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ಎಲ್ಲದರ ದರ ಹೆಚ್ಚಳ ಮಾಡುತ್ತಿದ್ದಾರೆ‌. ಇನ್ನು ಹಲವು ಬೆಲೆ ಏರಿಕೆಗಳು ಬಾಕಿ ಇದೆ.

#f1f1f1 - POINT 4ವಿನಾಕಾರಣ ತಮ್ಮ ಮೇಲೆ ಆರೋಪ ಬಂದಾಗ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ತನಿಖೆ ಬಳಿಕ ನಿರ್ದೋಷಿ ಎಂಬ ತೀರ್ಪು ಬಂತು. ಸಂತೋಷ್ ಆತ್ಮಹತ್ಯೆ ಪ್ರಕರಣ ಸಂದರ್ಭ ತಮಗೆ ತೊಂದರೆ ಕೊಟ್ಟವರೆಲ್ಲ ಈಗಲು ಅನುಭವಿಸುತ್ತಿದ್ದಾರೆ. ಇನ್ಮುಂದೆಯು ಅನುಭವಿಸುತ್ತಾರೆ. ರಾಜಕಾರಣದಲ್ಲಿ ಮುಗಿಸಲು ಪ್ರಯತ್ನಿಸಿದ್ದರು. ಪ್ರಿಯಾಂಕ್‌ ಖರ್ಗೆ ವಿಚಾರದಲ್ಲಿ ಯಾರು ತಪ್ಪಿತಸ್ಥರಿದ್ದಾರೋ ಅವರ ಬಗ್ಗೆ ಭಗವಂತ ನೋಡಿಕೊಳ್ಳುತ್ತಾನೆ. ಸುಖಾಸುಮ್ಮನೆ ಆರೋಪ ಮಾಡಿದರೆ ಅನುಭವಿಸುತ್ತಾರೆ‌.

ರಾಷ್ಟ್ರಭಕ್ತರ ಬಳಗದ ಎಂ.ಶಂಕರ್‌, ಮಹಾಲಿಂಗಯ್ಯ ಶಾಸ್ತ್ರಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಹೆಚ್‌.ಟಿ.ಬಳಿಗಾರ್‌ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment