ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JANUARY 2024
ಹೊಸನಗರ : ಕ್ಷುಲಕ ವಿಚಾರಕ್ಕೆ ಸ್ನೇಹಿತರ (Friends) ಮಧ್ಯೆ ಗಲಾಟೆಯಾಗಿದ್ದು ಬಿಡಿಸಲು ಹೋದ ಸಂಬಂಧಿಗೆ ರೇಜರ್ನಿಂದ ಇರಿಯಲಾಗಿದೆ. ಗಾಯಾಗೊಂಡಿರುವ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಸನಗರ ತಾಲೂಕು ಕೇಶವಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ತಿಕ್ ಎಂಬಾತನ ಹೊಟ್ಟೆಗೆ ರೇಜರ್ನಿಂದ ಇರಿಯಲಾಗಿದೆ. ರಘು ಮತ್ತು ಆತನ ಸ್ನೇಹಿತ ಮಧ್ಯೆ ವೈಮನಸು ಉಂಟಾಗಿತ್ತು. ಮಾತುಕತೆ ವೇಳೆ ರಘುಗೆ ಆತನ ಸ್ನೇಹಿತ ಹೊಡೆಯಲು ಬಂದಾಗ ರಘುವಿನ ಸಂಬಂಧಿ ಕಾರ್ತಿಕ್ ತಡೆದಿದ್ದಾನೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್ ಗ್ರೂಪ್, ಆಗಿದ್ದೇನು?
ರಘುವಿನ ಸ್ನೇಹಿತ ತನ್ನ ಜೇಬಿನಲ್ಲಿದ್ದ ರೇಜರ್ನಿಂದ ಕಾರ್ತಿಕ್ಗೆ ಚುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಾಳು ಕಾರ್ತಿಕ್ಗೆ ಹೊಸನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲ ಮಾಡಲಾಗಿದೆ. ಹೊಸನಗರ ಠಾಣೆಯಲ್ಲಿ ಪ್ರವೀಣ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






