ಕನಸಿನಕಟ್ಟೆಯಲ್ಲಿ ವಿದ್ಯುತ್‌ ಶಾಕ್‌ಗೆ ಯುವಕ ಸಾವು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS, 6 JANUARY 2025
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಹೊಳೆಹೊನ್ನೂರು : ಪಂಪ್‌ಸೆಟ್‌ ಸ್ವಿಚ್‌ ಆಫ್‌ ಮಾಡಲು ತೆರಳಿದ್ದಾಗ ವಿದ್ಯುತ್‌ ಪ್ರವಹಿಸಿ (Electricity) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಕನಸಿನಕಟ್ಟೆ ಗ್ರಾಮದ ದರ್ಶನ್‌ (20) ಮೃತ ಯುವಕ. ಭಾನುವಾರ ಸಂಜೆ ತಮ್ಮ ಜಮೀನಿನಲ್ಲಿ ಘಟನೆ ಸಂಭವಿಸಿದೆ.

ನೀರು ಹಾಯಿಸಲು ದರ್ಶನ್‌ ತಮ್ಮ ತೋಟಕ್ಕೆ ತೆರಳಿದ್ದರು. ಈ ಸಂದರ್ಭ ಪಂಪ್‌ಸೆಟ್‌ನ ಸ್ವಿಚ್‌ ಆಫ್‌ ಮಾಡುವಾಗ ವಿದ್ಯುತ್‌ ಶಾಕ್‌ ತಗುಲಿದೆ ಎಂದು ಹೇಳಲಾಗುತ್ತಿದೆ. ನೆರೆಹೊರೆ ಜಮೀನಿನವರು ಇದನ್ನು ಗಮನಿಸಿ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Kanasinakatte-Youth-Darshan-succumbed Electricity

ಇದನ್ನೂ ಓದಿ » ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Leave a Comment