ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 7 JANUARY 2025
ಹೊಸನಗರ : ತಾಲೂಕಿನ ಹುಲಿಕಲ್ ಘಾಟ್ (Hulikal Ghat) ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ವಿಫಲವಾಗಿ 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್ ಭಾನುವಾರ ತಡರಾತ್ರಿ 1.45ಕ್ಕೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಇಕ್ಕೆಲಗಳಲ್ಲಿ ತಡೆಗೋಡೆ ಇಲ್ಲ. ಪಟ್ಟಿ ತರದ ಪ್ಲೇಟ್ ಅಳವಡಿಸಲಾಗಿದ್ದು, ಇದ್ದೂ ಇಲ್ಲದಂತಾಗಿದೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ಉತ್ತಮ ತಡೆಗೋಡೆ ಇದ್ದಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ.
ಇದನ್ನು ಓದಿ » ಕನಸಿನಕಟ್ಟೆಯಲ್ಲಿ ವಿದ್ಯುತ್ ಶಾಕ್ಗೆ ಯುವಕ ಸಾವು, ಹೇಗಾಯ್ತು ಘಟನೆ?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















