ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JANUARY 2025
ಶಿವಮೊಗ್ಗ : ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ (Bank) ಒಂದಕ್ಕೆ ದಂಪತಿ 1.70 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್ನಲ್ಲಿ ಚಿನ್ನಾಭರಣ ಪರಿಶೀಲಿಸುವ ಅಪ್ರೈಸರ್ಗಳು ದಂಪತಿ ಜೊತೆಗೆ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ.
ಶಿವಮೊಗ್ಗದ ಶೇಷಾದ್ರಿಪುರಂನ ಬ್ಯಾಂಕ್ನಲ್ಲಿ ಶಾಂತಿನಗರದ ದಂಪತಿ ಚಿನ್ನಾಭರಣ ಅಡಮಾನವಿಟ್ಟಿದ್ದರು. ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನಾಭರಣದ ಅಸಲಿಯತ್ತು ಪರಿಶೀಲಿಸುವ ಇಬ್ಬರು ಅಪ್ರೈಸರ್ಗಳು ಕೂಡ ದಂಪತಿ ಅಡವಿಟ್ಟ ನಕಲಿ ಬಂಗಾರವನ್ನು ಅಸಲಿ ಬಂಗಾರವೆಂದು ತಿಳಿಸಿದ್ದರು. ಅದರಂತೆ ಸಾಲ ಪಡೆದಿದ್ದರು. ಪುನರ್ ಪರಶೀಲಿಸಿದಾಗ ದಂಪತಿ ಅಡವಿಟ್ಟಿರುವುದು ನಕಲಿ ಬಂಗಾರ ಎಂಬುದು ಸಾಬೀತಾಗಿದೆ.

ಈ ಹಿನ್ನೆಲೆ ನಕಲಿ ಬಂಗಾರ ಅಡವಿಟ್ಟು ಸಾಲ ಪಡೆದ ದಂಪತಿ, ಇಬ್ಬರು ಅಪ್ರೈಸರ್ಗಳ ವಿರುದ್ಧ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಬ್ಯಾಂಕ್ ಮತ್ತು ಆರೋಪಿಗಳ ಹೆಸರು ಬಹಿರಂಗಪಡಿಸಿಲ್ಲ. ಪ್ರಕರಣದ ಕುರಿತು ಜನರಿಗೆ ಮಾಹಿತಿ ತಿಳಿಸುವ ಉದ್ದೇಶದಿಂದ ಸುದ್ದಿ ಪ್ರಕಟಿಸಲಾಗಿದೆ.)
ಇದನ್ನೂ ಓದಿ » ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು














