ವ್ಯಾಪಾರಿಗೆ ಇರಿತ, ಶಿವಮೊಗ್ಗದ ಗಾಂಧಿ ಬಜಾರ್‌ ಬಂದ್‌, ಇಲ್ಲಿದೆ ಘಟನೆಯ ಕಂಪ್ಲೀಟ್‌ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 15 JANUARY 2025

ಶಿವಮೊಗ್ಗ : ವಿಳಾಸ ಕೇಳುವ ನೆಪದಲ್ಲಿ ವ್ಯಾಪಾರಿಯೊಬ್ಬನ (Merchant) ಮೇಲೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ಆಕ್ರೋಶಗೊಂಡ ಗಾಂಧಿ ಬಜಾರ್‌ ವರ್ತಕರು ಇವತ್ತು ಅಂಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಅಲ್ಲದೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕಚೋರಿ ವ್ಯಾಪಾರಿಗೆ ಚಾಕು ಇರಿತ

ಶಿವಮೊಗ್ಗದ ಕಸ್ತೂರ ಬಾ ರಸ್ತೆಯಲ್ಲಿ ಕಚೋರಿ ವ್ಯಾಪಾರ ಮಾಡುತ್ತಿದ್ದ ಹೀರಾಲಾಲ್‌ ಸೇನ್‌ ಎಂಬಾತನ ಮೇಲೆ ನಾಲ್ವರು ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾರೆ. ಕೈ ಮತ್ತು ಕಾಲಿಗೆ ಗಾಯವಾಗಿದ್ದು ಬಿ.ಹೆಚ್.ರಸ್ತೆಯ ಅಶೋಕ ಸಂಜೀವಿನಿ ಆಸ್ಪತ್ರೆಗೆ ಹೀರಾಲಾಲ್‌ ಸೇನ್‌ ದಾಖಲಾಗಿದ್ದು, ಚಿಕಿತ್ಸೆ ಪಡೆಯತ್ತಿದ್ದಾರೆ.

attack-against-gandhi-bazaar-merchant

ನಿನ್ನೆ ಸಂಜೆ ಫ್ಯಾನ್‌ ರಿಪೇರಿ ಅಂಗಡಿಯ ವಿಳಾಸ ಕೇಳಿ ತೆರಳಿದ್ದ ವ್ಯಕ್ತಿಯೊಬ್ಬ ಕೆಲವೇ ಹೊತ್ತಿನಲ್ಲಿ ಹಿಂತಿರುಗಿದ್ದ. ಆತನೊಂದಿಗೆ ಇತರೆ ಮೂವರು ಇದ್ದರು. ಒಟ್ಟು ನಾಲ್ವರು ನಮ್ಮ ಅಣ್ಣನ ಮೇಲೆ ದಾಳಿ ನಡೆಸಿದರು. ಅವರಲ್ಲಿ ಒಬ್ಬನ ಬಳಿ ಚಾಕು ಇತ್ತು. ಆತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

– ಉತ್ತಮ ಕುಮಾರ್‌, ಹೀರಾಲಾಲ್‌ ಸೇನ್‌ ಸಹೋದರ

RED-LINE

Gandhi Bazaar Bandh in Shimoga- merchant

ಇನ್ನು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್‌ ಆಗಿದೆ. ಅಂಗಡಿಯೊಂದರ ಮುಂದಿರುವ ಸಿಸಿ ಕ್ಯಾಮರಾದಲ್ಲಿ ಗಲಾಟೆಯ ದೃಶ್ಯ ಸೆರೆಯಾಗಿತ್ತು.

Abhishek-padavidhara-sahakara-sanga

ಗಾಂಧಿ ಬಜಾರ್‌ನಲ್ಲಿ ಅಂಗಡಿಗಳು ಬಂದ್‌

ಹೀರಾಲಾಲ್‌ ಸೇನ್‌ ಮೇಲಿನ ಹಲ್ಲೆ ಖಂಡಿಸಿ ಗಾಂಧಿ ಬಜಾರ್‌ ವರ್ತಕರು ಇವತ್ತು ಪ್ರತಿಭಟನೆ ನಡೆಸಿದರು. ಅಂಗಡಿಗಳನ್ನು ಬಂದ್‌ ಮಾಡಿದ ವರ್ತಕರು, ಹಲ್ಲೆಕೋರರ ಬಂಧನಕ್ಕೆ ಆಗ್ರಹಿಸಿ ಮೆರವಣಿಗೆ ನಡೆಸಿದರು. ಕಪ್ಪು ಪಟ್ಟಿ ಧರಿಸಿ ಗಾಂಧಿ ಬಜಾರ್‌ನಿಂದ ಜಿಲ್ಲಾ ರಕ್ಷಣಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮಾಡಿದರು.

Gandhi Bazaar Bandh in Shimoga - merchant

ಗಾಂಧಿ ಬಜಾರ್‌ನಲ್ಲಿ ಜನ ಸಂದಣಿ ಹೆಚ್ಚಿದೆ. ವ್ಯಾಪಾರಿಗಳು, ಜನರು ಮತ್ತು ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಓಡಾಡುವುದೆ ಕಷ್ಟವಾಗಿದೆ. ಹೀಗಿದ್ದೂ ವ್ಯಾಪಾರ ಮಾಡುತ್ತಿದ್ದೇವೆ. ಆದರೆ ವ್ಯಾಪಾರಸ್ಥರ ಮೇಲೆ ದುಷ್ಕರ್ಮಿಗಳು ಗೂಂಡಾ ವರ್ತನೆ ತೋರಿಸಿ ಆತಂಕ ಮೂಡಿಸಿದ್ದಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಎಸ್‌.ಪಿ.ಗೆ ಮನವಿ ಮಾಡಿದ್ದೇವೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ.

– ವಿಜಯ ಕುಮಾರ್‌ ದಿನಕರ್‌, ಗಾಂಧಿ ಬಜಾರ್‌ ವರ್ತಕರ ಸಂಘದ ಅಧ್ಯಕ್ಷ

RED-LINE

ಇದನ್ನೂ ಓದಿ » ಶಿವಮೊಗ್ಗ ನಂದನ್‌ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಪ್ರಮುಖ ವಿಷಯಗಳು ಇಲ್ಲಿವೆ

ಒಬ್ಬನ ಅರೆಸ್ಟ್‌, ಮೂವರಿಗೆ ಶೋಧ

ಇನ್ನು, ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಹಲ್ಲೆ ನಡೆಸಿದ ಆರೋಪಿಗಳ ಈಗಾಗಲೆ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಮದನ್‌ ಅಲಿಯಾಸ್‌ ಮಂಜುನಾಥ (35) ಬಂಧಿತ.

Gandhi Bazaar Bandh in Shimoga - merchant

ಕಸ್ತೂರ ಬಾ ರಸ್ತೆಯಲ್ಲಿ ಸಂಜೆ 6 ಗಂಟೆಗೆ ಕಚೋರಿ ಮಾರಾಟಗಾರನ ಮೇಲೆ ಹಲ್ಲೆಯಾಗಿದೆ. ಸುಳ್ಳು ವಿಳಾಸ ಹೇಳಿದ್ದೀಯ ಎಂದು ಕಚೋರಿ ವ್ಯಾಪಾರಿ ಜೊತೆಗೆ ಆರೋಪಿಗಳು ಮಾತಿಗೆ ಮಾತು ಬೆಳೆಸಿ ಹಲ್ಲೆ ನಡೆಸಿದ್ದಾರೆ. ನಾಲ್ವರ ಪೈಕಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬೀಟ್‌ ಹೆಚ್ಚಳ ಮಾಡುವಂತೆ ವ್ಯಾಪಾರಿಗಳು ಮನವಿ ಮಾಡಿದ್ದಾರೆ.

– ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

RED-LINE

ಕಸ್ತೂರ ಬಾ ರಸ್ತೆಯಲ್ಲಿ ಕಚೋರಿ ವ್ಯಾಪಾರಿ ಮೇಲಿನ ಹಲ್ಲೆ ಪ್ರಕರಣ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 15, 2025

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment