SHIVAMOGGA LIVE NEWS, 16 JANUARY 2025
ಶಿವಮೊಗ್ಗ : KSRTC ಬಸ್ನಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ ಮುಂದುವರೆದಿದೆ. ಭದ್ರಾವತಿಗೆ ತೆರಳಲು ಬಸ್ ಹತ್ತಿದ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ ಬ್ಯಾಂಕ್ ದಾಖಲೆಗಳು ಮತ್ತು ನಗದು ಇದ್ದ ಪರ್ಸ್ ಕಳ್ಳತನ ಮಾಡಲಾಗಿದೆ.
ಭದ್ರಾವತಿಯ ಶಶಿರೇಖಾ ಅವರ ವ್ಯಾನಿಟಿ ಬ್ಯಾಗ್ನಿಂದ ಪರ್ಸ್ ಕಳ್ಳತನ ಮಾಡಲಾಗಿದೆ. ರಿಪ್ಪನ್ಪೇಟೆಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಶಶಿರೇಖಾ ಅವರು ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ಬಸ್ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಬಸ್ ಹತ್ತಿ ಟಿಕೆಟ್ ಮಾಡಿಸಲು ಆಧಾರ್ ಕಾರ್ಡ್ ತೆಗೆಯಲು ವ್ಯಾನಿಟಿ ಬ್ಯಾಗ್ಗೆ ಕೈ ಹಾಕಿದಾಗ ಪರ್ಸ್ ಕಳ್ಳತನವಾಗಿರುವುದು ಗೊತ್ತಾಗಿದೆ. ಪರ್ಸ್ನಲ್ಲಿ 60 ಸಾವಿರ ರೂ. ನಗದು, ವಿವಿಧ ಬ್ಯಾಂಕ್ಗಳ ಎಟಿಎಂ, ಚೆಕ್ ಪುಸ್ತಕಗಳು ಇದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200