‘4 ಪರ್ಸೆಂಟ್‌ ಕಮಿಷನ್‌‌ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?

SHIVAMOGGA LIVE NEWS, 16 JANUARY 2024

ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಂದ ಲಂಚ (commission) ಪಡೆಯುತ್ತಿದ್ದ ಸಂದರ್ಭ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಂದು ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಚೇರಿ ವ್ಯವಸ್ಥಾಪಕ ಎಸ್‌.ಆರ್‌.ಸಿದ್ದೇಶ್‌ 10 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗ ರೆಡ್‌ ಹಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಸಿದ್ದೇಶ್‌ನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

4 ಪರ್ಸೆಂಟ್‌ ಕಮಿಷನ್‌ಗೆ ಡಿಮಾಂಡ್‌

ಸುನಿಲ್‌ ಕುಮಾರ್‌ ಮಹಾನಗರ ಪಾಲಿಕೆ ಆವರಣದ ಇಂಜಿನಿಯರ್‌ ಕಟ್ಟದ ಮೇಲ್ಭಾಗದಲ್ಲಿ ಶೆಡ್‌ ನಿರ್ಮಾಣಕ್ಕೆ ಗುತ್ತಿಗೆ ಪಡೆದಿದ್ದರು. 2024ರ ಡಿಸೆಂಬರ್‌ನಲ್ಲಿ ಶೆಡ್‌ ಪೂರ್ಣಗೊಂಡಿದ್ದು ಹಣ ಮಂಜೂರು ಮಾಡುವಂತೆ ಬಿಲ್‌ ಸಲ್ಲಿಸಿದ್ದರು. ಕಾಮಗಾರಿಯ ಒಟ್ಟು ಮೊತ್ತದಲ್ಲಿ 4 ಪರ್ಸೆಂಟ್‌ ಕಮಿಷನ್‌ ಹಣ ನೀಡಿದರೆ ಬಿಲ್‌ ಮಂಜೂರು ಮಾಡುವುದಾಗಿ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಸಿದ್ದೇಶ್‌ ಬೇಡಿ ಇಟ್ಟಿದ್ದ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Kalleshwara-Enterprises.webp

Abhishek-padavidhara-sahakara-sanga

ಲಂಚ ಪಡೆಯುತ್ತಿದ್ದಾಗ ದಾಳಿ

11,500 ರೂ. ಹಣಕ್ಕೆ ಸಿದ್ದೇಶ್‌ ಬೇಡಿಕೆ ಇಟ್ಟಿದ್ದರು. ಇವತ್ತು 10 ಸಾವಿರ ರೂ. ಹಣ ಪಡೆಯುವ ಸಂದರ್ಭ ದಾಳಿ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

lokayukta-officials-raid-on-shimoga-mahanagara-palike

ಲೋಕಾಯುಕ್ತ ಎಸ್‌ಪಿ ಮಂಜುನಾಥ್‌ ಚೌದರಿ ಮಾರ್ಗದರ್ಶನದಲ್ಲಿ ದಾಳಿ ನಡೆಯಿತು. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಹೆಚ್.ಎಸ್.ಸುರೇಶ್‌‌, ವೀರಬಸಪ್ಪ ಎಲ್‌.ಕುಸಲಾಪುರ ದಾಳಿ ನೇತೃತ್ವ ವಹಿಸಿದ್ದರು. ಸಿಬ್ಬಂದಿ ಯೋಗೇಶ್.ಜಿ.ಸಿ., ಟೀಕಪ್ಪ.ಎನ್.ಬಿ., ಮಂಜುನಾಥ್.ಎಂ., ಸುರೇಂದ್ರ ಹೆಚ್.ಜಿ., ಬಿ.ಟಿ ಚನ್ನೇಶ, ಪ್ರಶಾಂತ್ ಕುಮಾರ್, ದೇವರಾಜ್.ವಿ., ಅರುಣ್ ಕುಮಾರ್, ಆದರ್ಶ, ಪ್ರಕಾಶ್, ಅಂಜಲಿ, ಪ್ರದೀಪ್, ಗೋಪಿ ವಿ, ಜಯಂತ್, ಗಂಗಾಧರ.ಬಿ.ಕೆ., ತರುಣ ಕುಮಾರ್.ಎ.ಎನ್ ದಾಳಿಯಲ್ಲಿ ಭಾಗವಹಿಸಿದ್ದರು.

toyota-exchange-mela-

ಇದನ್ನೂ ಓದಿ » ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಡಾಕ್ಟರ್‌, ನರ್ಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment