ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 18 JANUARY 2025
ಸಾಗರ : ಗಣಪತಿ ಕೆರೆ (Ganapathi kere) ದಂಡೆ ಮೇಲೆ ನಡೆಯುತ್ತಿರುವ ಕಾಮಗಾರಿಯನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಪರಿಶೀಲಿಸಿದರು. ಈ ಸಂದರ್ಭ ಕಾಮಗಾರಿ ಆರಂಭದಲ್ಲಿ ಬಳಕೆಯಾದ ಇಂಟರ್ಲಾಕ್ ಟೈಲ್ಸ್ ಬದಲು ಬೇರೊಂದು ಟೈಲ್ಸ್ ಬಳಸಿರುವುದಕ್ಕ ಹಾಲಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಹಾಲಪ್ಪ ಏನೆಲ್ಲ ಹೇಳಿದರು?
ನಮ್ಮ ಆಡಳಿತಾವಧಿಯಲ್ಲಿ ಗಣಪತಿ ಕೆರೆ ದಂಡೆ ಮೇಲೆ ಬಣ್ಣ ಮಿಶ್ರಿತ ಇಂಟರ್ಲಾಕ್ ಟೈಲ್ಸ್ ಅಳವಡಿಸಿ ರಸ್ತೆ ನಿರ್ಮಾಣಕ್ಕೆ ಯೋಜಿಸಲಾಗಿತ್ತು. ಇದಕ್ಕಾಗಿ ನಗರಸಭೆಯಿಂದ 32 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಲಾಗಿತ್ತು. ಆದರೆ ಈಗ ಕಡಿಮೆ ಗುಣಮಟ್ಟದ ಟೈಲ್ಸ್ ಬಳಸಲಾಗಿದೆ ಎಂಬ ಆರೋಪವಿದೆ ಎಂದು ಹಾಲಪ್ಪ ತಿಳಿಸಿದರು.

ಮೂಲ ಯೋಜನೆಯಂತೆ ಬಣ್ಣ ಮಿಶ್ರಿತ ಲಾಕಿಂಗ್ ಟೈಲ್ಸ್ ಬಳಸಿ ರಸ್ತೆ ನಿರ್ಮಿಸಬೇಕು. ಸಹಾಯಕ ಆಯುಕ್ತರು, ನಗರಸಭೆ ಕಮಿಷನರ್ ಅವರು ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಹಾಲಪ್ಪ ಎಚ್ಚರಿಸಿದರು.

ತಮ್ಮ ಅವಧಿಯಲ್ಲಿ ಗಣಪತಿ ಕೆರೆ ಸ್ವಚ್ಛತೆಗೆ ನಗರಸಭೆಯ ಹಣ ಬಳಸಿರುವುದಾಗಿ ಸುದ್ದಿ ಬಿತ್ತಿರಸಲಾಗುತ್ತಿದೆ. ಆದರೆ ಸ್ವಚ್ಛತಾ ಕಾರ್ಯಕ್ಕೆ ನಗರಸಭೆಯಿಂದ ನಯಾಪೈಸೆ ಹಣವನ್ನು ಬಳಸಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಮಧುರಾ ಶಿವಾನಂದ್, ವಿ.ಮಹೇಶ್, ಗಣೇಶ್ ಪ್ರಸಾದ್, ಸವಿತಾ ವಾಸು, ಪ್ರೇಮ್ ಸಿಂಗ್, ಕೆ.ಎಸ್.ಪ್ರಶಾಂತ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಕಾಗೋಡು ತಿಮ್ಮಪ್ಪಗೆ ಒಂದೇ ದಿನ ಎರಡು ವಿವಿಯಿಂದ ಎರಡು ಗೌರವ ಡಾಕ್ಟರೇಟ್ ಪ್ರದಾನ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















