ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 22 JANUARY 2025
ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ.
ಅರನಲ್ಲಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್ ಒಂದರ ಎಟಿಎಂ ಸೆಂಟರ್ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ ಬಿಡಿಸಲು ನೆರವಾಗಿದ್ದರು. ದೇವಪ್ಪ ಅವರು ಸೂಚಿಸಿದಂತೆ 10 ಸಾವಿರ ರೂ. ಬಿಡಿಸಿ ಕೊಟ್ಟಿದ್ದರು. ಎಟಿಎಂ ಮೆಷಿನ್ನಿಂದ ಕಾರ್ಡ್ ಹೊರತೆಗೆದು ಕೊಡುವಾಗ ಆ ಅಪರಿಚಿತರು, ದೇವಪ್ಪ ಅವರ ಕಾರ್ಡ್ ಬದಲು ಬೇರೊಂದು ಕಾರ್ಡ್ ಕೊಟ್ಟಿದ್ದರು.

ಎಟಿಎಂ ಕಾರ್ಡ್ ಬದಲಾದ ವಿಚಾರ ಕೇವಲ 20 ನಿಮಿಷದಲ್ಲಿ ದೇವಪ್ಪ ಅವರಿಗೆ ಗೊತ್ತಾಗಿತ್ತು. ಕೂಡಲೆ ಬ್ಯಾಂಕ್ನ ಕಾಲ್ ಸೆಂಟರ್ಗೆ ಕರೆ ಮಾಡಿ ಕಾರ್ಡ್ ಬ್ಲಾಕ್ ಮಾಡಿಸಿದ್ದರು. ಅಷ್ಟರಲ್ಲಾಗಲೆ ವಂಚಕರು ಹಾರನಹಳ್ಳಿ ಮತ್ತು ಸವಳಂಗದ ಎಟಿಎಂ ಕೇಂದ್ರಗಳಿಂದ 40 ಸಾವಿರ ರೂ. ಹಣ ವಿತ್ ಡ್ರಾ ಮಾಡಿದ್ದರು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.20 ನಿಮಿಷದಲ್ಲಿ 40 ಸಾವಿರ ಮಾಯ

ಎಟಿಎಂ ಕೇಂದ್ರಗಳಲ್ಲಿ ನೆರವು ನೀಡುವಂತೆ ನಟಿಸಿ ಕಾರ್ಡ್ ಅದಲು ಬದಲು ಮಾಡಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಸಂಬಂಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಎಟಿಎಂ ಕೇಂದ್ರಗಳಲ್ಲಿ ಹಣ ಬಿಡಿಸುವಾಗ ಎಚ್ಚರ ವಹಿಸಬೇಕಿದೆ.ಹೆಚ್ಚುತ್ತಿದೆ ಇಂತಹ ವಂಚನೆ
ಇದನ್ನೂ ಓದಿ » ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















