ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 27 JANUARY 2025
ಶಿವಮೊಗ್ಗ : ATM ಮೆಷಿನ್ ಮುರಿದು ಹಣ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ನೆಹರು ರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಕಳ್ಳತನಕ್ಕೆ ಪ್ರಯತ್ನವಾಗಿದೆ. ಘಟನೆ ನಡೆದು ಕೆಲವೇ ಹೊತ್ತಿಗೆ ಪೊಲೀಸರು ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಎಟಿಎಂ ಮೆಷಿನ್ ಮುರಿಯಲು ಯತ್ನ



ಕೆಲವೇ ಹೊತ್ತಿನಲ್ಲಿ ಆರೋಪಿ ವಶಕ್ಕೆ
ಎಟಿಎಂನಲ್ಲಿ ಕಳ್ಳತನ ಯತ್ನದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬ್ಯಾಂಕ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ, ಸಿಸಿಟಿವಿ ಪರಿಶೀಲಿಸಿದರು.

ತಕ್ಷಣದಿಂದಲೇ ಕಾರ್ಯಪ್ರವೃತ್ತರಾದ ಕೋಟೆ ಠಾಣೆ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸಿದರು. ಕೆಲವೇ ಹೊತ್ತಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿದೆ. ಆರೋಪಿ ಬಿಹಾರ ಮೂಲದವನು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಬೀದರ್ನಲ್ಲಿ ಎಟಿಎಂಗೆ ಹಣ ತುಂಬವ ವಾಹನ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಮಂಗಳೂರಿನಲ್ಲಿ ಬ್ಯಾಂಕ್ ರಾಬರಿ ಪ್ರಕರಣದಿಂದ ರಾಜ್ಯದಲ್ಲಿ ಆತಂಕ ಮೂಡಿತ್ತು. ಈಗ ಶಿವಮೊಗ್ಗದಲ್ಲಿಯು ಎಟಿಎಂ ಮೆಷಿನ್ ಮುರಿದು ಹಣ ಕಳ್ಳತನಕ್ಕೆ ವಿಫಲ ಯತ್ನವಾಗಿದೆ.
ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, ಎಟಿಎಂ ಮೆಷಿನ್ಗಳಿಗೆ ಹಾನಿಯಾಗಿರುವ ಹಿನ್ನೆಲೆ ಎಟಿಎಂ ಕೇಂದ್ರವನ್ನು ಬಂದ್ ಮಾಡಲಾಗಿದೆ.
ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















