ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ

SHIVAMOGGA LIVE NEWS, 30 JANUARY 2024

ಶಿವಮೊಗ್ಗ : ಮೈಕ್ರೋ ಫೈನಾನ್ಸ್‌ಗಳ (Finance) ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಇವತ್ತು ಬೇರೆಲ್ಲ ಸಭೆಗಳನ್ನು ರದ್ದುಗೊಳಿಸಿ ಈ ವಿಚಾರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಮೈಕ್ರೋ ಫೈನಾನ್ಸ್‌ಗಳ ಬಡ್ಡಿದರ ಅಧಿಕವಿದೆ. ಒಂದು ಕೋಟಿಗು ಹೆಚ್ಚು ಕುಟುಂಬಗಳು ಈ ಫೈನಾನ್ಸ್‌ಗಳ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಕಾನೂನು ಸಲಹೆ, ಸಾಧಕ, ಬಾಧಕಗಳ ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆ ಆಂಧ್ರ ಮತ್ತು ತೆಲಂಗಾಣದಲ್ಲಿಯು ಇದೇ ರೀತಿಯ ಸಮಸ್ಯೆಯಾಗಿತ್ತು ಎಂದರು.

DK Shivakumar DCM

ಸಂಜೆ ವೇಳೆಗೆ ಸಾಲ ವಸೂಲಿಗೆ ಹೋಗುವಂತಿಲ್ಲ. ಇನ್ನು, ಮೈಕ್ರೋ ಫೈನಾನ್ಸ್‌ ಪೊಲೀಸ್‌ ಇಲಾಖೆಗೆ ಹೆಚ್ಚಿನ ಶಕ್ತಿ ನೀಡುವ ಪ್ರಯತ್ನವಾಗುತ್ತಿದೆ. ಅಲ್ಲದೆ ರಾಜ್ಯ ಸರ್ಕಾರದ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

Kalleshwara-Enterprises.webp

ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪ್ರಣಾಳಿಕೆಯಲ್ಲಿ ಘೋಷಿಸಿದ್ದೆವು. ಈಗ ಮುಖ್ಯಮಂತ್ರಿ ಅವರು ನಿರ್ಧಾರ ಪ್ರಕಟಿಸಿದ್ದಾರೆ. ಪ್ರಕರಣಗಳ ಕುರಿತು ಕನ್ನಡಪರ ಸಂಘಟನೆಗಳು ಅರ್ಜಿ ಸಲ್ಲಿಸಲಿ. ಪ್ರಕರಣಗಳ ನೈಜತೆ ಕುರಿತು ಕ್ಯಾಬಿನೆಟ್‌ ಸಬ್‌ ಕಮಿಟಿ ಪರಿಶೀಲಿಸಲಿದೆ. ನಂತರ ಕ್ಯಾಬಿನೆಟ್‌ನಲ್ಲಿ ಮಂಡಿಸಲಾಗುತ್ತದೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಡಿ.ಕೆ.ಶಿವಕುಮಾರ್‌, ಉಪ ಮುಖ್ಯಮಂತ್ರಿ

DK-Shivakumar-visit-to-shimoga-city

ಪತ್ನಿ ಸಹಿತ ಶಿವಮೊಗ್ಗಕ್ಕೆ ಡಿಸಿಎಂ

DK-Shivakumar-visit-to-shimoga-city

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪತ್ನಿ ಉಷಾ ಶಿವಕುಮಾರ್‌ ಅವರೊಂದಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಇನ್ನು, ಅಶೋಕ ವೃತ್ತದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಹೂಮಳೆಯ ಸ್ವಾಗತ ನೀಡಲಾಯಿತು.

ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ರಾಜ್ಯ ಸರ್ಕಾರದಿಂದ ಪ್ರಮುಖ ನಿರ್ಧಾರ ಕೈಗೊಳ್ಳಲಾಗುತ್ತಿದೆʼ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment