SHIVAMOGGA LIVE NEWS, 7 FEBRUARY 2025
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸೊರಬ : ರಸ್ತೆಯಲ್ಲಿ ದಿಢೀರ್ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು (Deer) ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್ ಎದುರಾದ ಜಿಂಕೆಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸತೀಶ್ ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು.

ಹಾಯಾ ಗ್ರಾಮದ ದೇವರಾಜ್ ಎಂಬುವವರಿಗೆ ಸತೀಶ್ ಕರೆ ಮಾಡಿ ಅಪಘಾತದ ವಿಷಯ ತಿಳಿಸಿದ್ದರು. ಕೂಡಲೆ ಸತೀಶ್ರನ್ನು ಸೊರಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸತೀಶ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಂಬಳ, ಟ್ರ್ಯಾಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಯಾವಾಗ? ಎಲ್ಲಿ ನಡೆಯುತ್ತೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





