ಪ್ರತಿದಿನ ಒಂದರಿಂದ ಎರಡು ಸಾವಿರ ರೂ. ಸಂಪಾದಿಸಬಹುದು, ನಂಬಿದ ಮಹಿಳೆಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 7 FEBRUARY 2025

ಶಿವಮೊಗ್ಗ : ಪಾರ್ಟ್‌ ಟೈಮ್‌ ಉದ್ಯೋಗ ಮಾಡಿ ಪ್ರತಿದಿನ ಒಂದರಿಂದ ಎರಡು ಸಾವಿರ ರೂ.ವರೆಗೆ ಆದಾಯ (Income) ಗಳಿಸಬಹುದು ಎಂದು ನಂಬಿಸಿ ಮಹಿಳೆಗೆ 5.90 ಲಕ್ಷ ರೂ. ವಂಚಿಸಲಾಗಿದೆ. ಮಹಿಳೆಯೊಬ್ಬರು ಹಣ ಕಳೆದುಕೊಂಡಿರುವುದಾಗಿ ಆರೋಪಿಸಿ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಂಚನೆ ಆಗಿದ್ದು ಹೇಗೆ?

ಶಿವಮೊಗ್ಗದ ಮಹಿಳೆ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂ ನೋಡುತ್ತಿದ್ದಾಗ ಪಾರ್ಟ್‌ ಟೈಮ್‌ ಜಾಬ್‌ ಜಾಹೀರಾತು ಗಮನಿಸಿದ್ದರು. ಅದರ ಲಿಂಕ್‌ ಕ್ಲಿಕ್‌ ಮಾಡಿದಾಗ ವಾಟ್ಸಪ್‌ ಓಪನ್‌ ಆಗಿತ್ತು. ನಂತರ ವಿಡಿಯೋ ವೀಕ್ಷಿಸಿ ಆದಾಯ ಗಳಿಸಿ ಎಂದು ತಿಳಿಸಿ ಮಹಿಳೆಯನ್ನು ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಲಾಗಿತ್ತು. ಟಾಸ್ಕ್‌ ಪೂರೈಸಿ ಹಣ ಸಂಪಾದಿಸಬಹುದು ಎಂದು ತಿಳಿಸಲಾಗಿತ್ತು. ಮೊದಲ ದಿನ ಮಹಿಳೆಗೆ ವಿವಿಧ ಟಾಸ್ಕ್‌ ನೀಡಿಲಾಗಿತ್ತು. ಟಾಸ್ಕ್‌ ಪೂರೈಸಿದ ನಂತರ 1200 ರೂ. ಹಣವನ್ನು ಮಹಿಳೆಯ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗಿತ್ತು.

SMS-Fraud-Shimoga-CEN-Police-Station.

ಆಸೆ ಹುಟ್ಟಿಸಿ, ನಂಬಿಸಿ ಟೋಪಿ ಹಾಕಿದರು

ಮರುದಿನ ವಿವಿಧ ಟಾಸ್ಕ್‌ಗಳನ್ನು ನೀಡಿ, ಹೆಚ್ಚಿನ ಆದಾಯ ಗಳಿಸಬಹುದು ಎಂದು ಆಸೆ ಹುಟ್ಟಿಸಲಾಯಿತು. ಈ ಟಾಸ್ಕ್‌ ಪೂರೈಸಲು ಹಣ ಹೂಡಿಕೆ ಮಾಡಬೇಕು. ಟಾಸ್ಕ್‌ ಮುಗಿದ ಮೇಲೆ ಲಾಭಾಂಶದ ಜೊತೆಗೆ ಈ ಹಣವನ್ನೂ ಹಿಂತಿರುಗಿಸಲಾಗುತ್ತದೆ ಎಂದು ಟೆಲಿಗ್ರಾಂ ಮೂಲಕವೆ ನಂಬಿಸಲಾಯಿತು. ಹಾಗಾಗಿ ಮಹಿಳೆ ಹಂತ ಹಂತವಾಗಿ 2.93 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಸ್ವಲ್ಪ ಸಮಯದ ಬಳಿಕ ತಮ್ಮ ಹಣ ಹಿಂತಿರುಗಿಸುವಂತೆ ಮಹಿಳೆ ಮನವಿ ಮಾಡಿದಾಗ, ನಿಮ್ಮ ಅಕೌಂಟ್‌ ಫ್ರೀಜ್‌ ಆಗಿದೆ ಎಂದು ಟೆಲಿಗ್ರಾಂನಲ್ಲಿ ತಿಳಿಸಲಾಗಿತ್ತು.

Web-Design-by-New-Web-techy

ಪುನಃ ಎರಡು ಲಕ್ಷ ರೂ. ಹೂಡಿಕೆ ಮಾಡಿದರೆ ಫ್ರೀಜ್‌ ಆಗಿರುವ ಅಕೌಂಟ್‌ನಿಂದ ಹಣ ಬಿಡಿಸಿ ಕೊಡುತ್ತೇವೆ ಎಂದು ಮಹಿಳೆಗೆ ನಂಬಿಸಲಾಯಿತು. ಆದ್ದರಿಂದ ಮಹಿಳೆ 2 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಆ ಬಳಿಕ ನಿಮ್ಮ ಹಣಕ್ಕೆ ಶೇ.30ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ ಎಂದು ಟೆಲಿಗ್ರಾಂನಲ್ಲಿ ಹೊಸ ಸಬೂಬು ಹೇಳಲು ಆರಂಭಿಸಿದರು. ಆಗ ಅನುಮಾನಗೊಂಡ ಮಹಿಳೆ ಪರಿಚಿತರಲ್ಲಿ ವಿಷಯ ತಿಳಿಸಿದ್ದಾರೆ. ವಂಚನೆಗೊಳಗಾದ ವಿಷಯ ತಿಳಿಯುತ್ತಲೆ ಸಿ.ಇ.ಎನ್‌ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ » ಜಿಂಕೆಗೆ ಡಿಕ್ಕಿ ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 7, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment