SHIVAMOGGA LIVE NEWS, 7 FEBRUARY 2025
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಪಾರ್ಟ್ ಟೈಮ್ ಉದ್ಯೋಗ ಮಾಡಿ ಪ್ರತಿದಿನ ಒಂದರಿಂದ ಎರಡು ಸಾವಿರ ರೂ.ವರೆಗೆ ಆದಾಯ (Income) ಗಳಿಸಬಹುದು ಎಂದು ನಂಬಿಸಿ ಮಹಿಳೆಗೆ 5.90 ಲಕ್ಷ ರೂ. ವಂಚಿಸಲಾಗಿದೆ. ಮಹಿಳೆಯೊಬ್ಬರು ಹಣ ಕಳೆದುಕೊಂಡಿರುವುದಾಗಿ ಆರೋಪಿಸಿ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವಂಚನೆ ಆಗಿದ್ದು ಹೇಗೆ?
ಶಿವಮೊಗ್ಗದ ಮಹಿಳೆ (ಹೆಸರು ಗೌಪ್ಯ) ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಪಾರ್ಟ್ ಟೈಮ್ ಜಾಬ್ ಜಾಹೀರಾತು ಗಮನಿಸಿದ್ದರು. ಅದರ ಲಿಂಕ್ ಕ್ಲಿಕ್ ಮಾಡಿದಾಗ ವಾಟ್ಸಪ್ ಓಪನ್ ಆಗಿತ್ತು. ನಂತರ ವಿಡಿಯೋ ವೀಕ್ಷಿಸಿ ಆದಾಯ ಗಳಿಸಿ ಎಂದು ತಿಳಿಸಿ ಮಹಿಳೆಯನ್ನು ಟೆಲಿಗ್ರಾಂ ಗ್ರೂಪ್ಗೆ ಸೇರಿಸಲಾಗಿತ್ತು. ಟಾಸ್ಕ್ ಪೂರೈಸಿ ಹಣ ಸಂಪಾದಿಸಬಹುದು ಎಂದು ತಿಳಿಸಲಾಗಿತ್ತು. ಮೊದಲ ದಿನ ಮಹಿಳೆಗೆ ವಿವಿಧ ಟಾಸ್ಕ್ ನೀಡಿಲಾಗಿತ್ತು. ಟಾಸ್ಕ್ ಪೂರೈಸಿದ ನಂತರ 1200 ರೂ. ಹಣವನ್ನು ಮಹಿಳೆಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿತ್ತು.

ಆಸೆ ಹುಟ್ಟಿಸಿ, ನಂಬಿಸಿ ಟೋಪಿ ಹಾಕಿದರು
ಮರುದಿನ ವಿವಿಧ ಟಾಸ್ಕ್ಗಳನ್ನು ನೀಡಿ, ಹೆಚ್ಚಿನ ಆದಾಯ ಗಳಿಸಬಹುದು ಎಂದು ಆಸೆ ಹುಟ್ಟಿಸಲಾಯಿತು. ಈ ಟಾಸ್ಕ್ ಪೂರೈಸಲು ಹಣ ಹೂಡಿಕೆ ಮಾಡಬೇಕು. ಟಾಸ್ಕ್ ಮುಗಿದ ಮೇಲೆ ಲಾಭಾಂಶದ ಜೊತೆಗೆ ಈ ಹಣವನ್ನೂ ಹಿಂತಿರುಗಿಸಲಾಗುತ್ತದೆ ಎಂದು ಟೆಲಿಗ್ರಾಂ ಮೂಲಕವೆ ನಂಬಿಸಲಾಯಿತು. ಹಾಗಾಗಿ ಮಹಿಳೆ ಹಂತ ಹಂತವಾಗಿ 2.93 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಸ್ವಲ್ಪ ಸಮಯದ ಬಳಿಕ ತಮ್ಮ ಹಣ ಹಿಂತಿರುಗಿಸುವಂತೆ ಮಹಿಳೆ ಮನವಿ ಮಾಡಿದಾಗ, ನಿಮ್ಮ ಅಕೌಂಟ್ ಫ್ರೀಜ್ ಆಗಿದೆ ಎಂದು ಟೆಲಿಗ್ರಾಂನಲ್ಲಿ ತಿಳಿಸಲಾಗಿತ್ತು.

ಪುನಃ ಎರಡು ಲಕ್ಷ ರೂ. ಹೂಡಿಕೆ ಮಾಡಿದರೆ ಫ್ರೀಜ್ ಆಗಿರುವ ಅಕೌಂಟ್ನಿಂದ ಹಣ ಬಿಡಿಸಿ ಕೊಡುತ್ತೇವೆ ಎಂದು ಮಹಿಳೆಗೆ ನಂಬಿಸಲಾಯಿತು. ಆದ್ದರಿಂದ ಮಹಿಳೆ 2 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಆ ಬಳಿಕ ನಿಮ್ಮ ಹಣಕ್ಕೆ ಶೇ.30ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ ಎಂದು ಟೆಲಿಗ್ರಾಂನಲ್ಲಿ ಹೊಸ ಸಬೂಬು ಹೇಳಲು ಆರಂಭಿಸಿದರು. ಆಗ ಅನುಮಾನಗೊಂಡ ಮಹಿಳೆ ಪರಿಚಿತರಲ್ಲಿ ವಿಷಯ ತಿಳಿಸಿದ್ದಾರೆ. ವಂಚನೆಗೊಳಗಾದ ವಿಷಯ ತಿಳಿಯುತ್ತಲೆ ಸಿ.ಇ.ಎನ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ » ಜಿಂಕೆಗೆ ಡಿಕ್ಕಿ ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






