SHIVAMOGGA LIVE NEWS, 15 FEBRUARY 2025
ಶಿವಮೊಗ್ಗ : ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು (Train) ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಯಾವಾಗ ಹೊರಡಲಿದೆ ರೈಲು?
» ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್ ತಲುಪಲಿದೆ.

» ಫೆಬ್ರವರಿ 25ರಂದು ಬೆಳಿಗ್ಗೆ 5.40ಕ್ಕೆ ಪ್ರಯಾಗರಾಜ್ನಿಂದ (ರೈಲು ಸಂಖ್ಯೆ 06224) ಹೊರಟು ಫೆಬ್ರವರಿ 27ರ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗ ತಲುಪಲಿದೆ.

ಫೆಬ್ರವರಿ 15 ರ ಮಧ್ಯಾಹ್ನದ ನಂತರ ವಿಶೇಷ ರೈಲಿನ ಬುಕಿಂಗ್ ಸೇವೆ ಆರಂಭವಾಗಲಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಹಾ ಕುಂಭಮೇಳ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಮಾಡಿ ಕೊಟ್ಟಿರುವ ರೈಲ್ವೆ ಇಲಾಖೆಗೆ ತುಂಬು ಹೃದಯದ ಧನ್ಯವಾದಗಳು.
• ಬಿ.ವೈ.ರಾಘವೇಂದ್ರ, ಸಂಸದ

ಇದನ್ನೂ ಓದಿ » ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ್ಯಾಪಿಡೋ ಬೈಕ್ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ್ಯಾಪಿಡೋ?
