ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ : ಶ್ರೀಗಂಧ ಮರವನ್ನು (sandalwood) ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಕತ್ತರಿಸಿ ಬೈಕ್ನಲ್ಲಿ ಸಾಗಣೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಕಳ್ಳರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಡಿತಲೆ ಮಾಡಲಾಗಿತ್ತು.
ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ನಿವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆಯ ರಾಘವೇಂದ್ರ (32) ಬಂಧಿತರು. ಹೊಸಕೆಸರೆ ಗ್ರಾಮದ ನೀರೇರಿ ನಿವಾಸಿ ಎಂ.ಭದ್ರಪ್ಪ ಅಲಿಯಾಸ್ ಕರಿಮಂಜ (32) ತಲೆಮರೆಸಿಕೊಂಡಿದ್ದಾನೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಿಂದ 18 ಕೆ.ಜಿ. ಶ್ರೀಗಂಧ ಹಾಗೂ ಸಾಗಣೆಗೆ ಬಳಸುತ್ತಿದ್ದ 3 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಎಸ್.ಅನಿಲ್ ಕುಮಾರ್, ಹರತಾಳು ಶಾಖೆ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಕೆ ಎನ್, ಸಿಬ್ಬಂದಿ ಪುಟ್ಟಸ್ವಾಮಿ ಕೆ.ವಿ, ಭರತ್ ಕುಮಾರ್, ಸುರೇಶ್ ವಿ, ರಾಜು ಎನ್, ಪ್ರಶಾಂತ ಜಿ, ವಾಹನ ಚಾಲಕ ಮಹೇಶ್ ಇದ್ದರು.


ಇದನ್ನೂ ಓದಿ » ಹಂದಿಗಾಗಿ ಕೈ ಕೈ ಮಿಲಾಯಿಸಿ ಆಸ್ಪತ್ರೆ ಸೇರಿದ ಯುವಕರು, ದೂರು, ಪ್ರತಿದೂರು ದಾಖಲು
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





