ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ರಸ್ತೆ ಮೇಲೆ ಆಯಿಲ್ (Oil) ಚೆಲ್ಲಿ ದ್ವಿಚಕ್ರ ವಾಹನಗಳು ಸ್ಕಿಡ್ ಆಗುತ್ತಿದ್ದರಿಂದ ಸಂಚಾರ ಠಾಣೆ ಪೊಲೀಸರೆ ರಸ್ತೆ ಕ್ಲೀನ್ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಆಯನೂರು ಸರ್ಕಲ್ ಸಮೀಪ ಇಂದು ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಕಳೆದ ಎರಡು ದಿನದ ಹಿಂದೆ ವಾಹನವೊಂದರಲ್ಲಿ ಆಯಿಲ್ ಸಾಗಿಸುತ್ತಿದ್ದಾಗ ಆಯನೂರು ಸರ್ಕಲ್ನಲ್ಲಿ ಚೆಲ್ಲಿತ್ತು. ಸರ್ಕಲ್ನಲ್ಲಿ ವಾಹನಗಳು ಸಾಗುವಾಗ ಸ್ಕಿಡ್ ಆಗುತ್ತಿತ್ತು. ಈ ಸಂಬಂಧ ದೂರು ಬಂದಿತ್ತು. ಅಪಘಾತಗಳು ಸಂಭವಿಸುವ ಸಾಧ್ಯತೆ ಇದ್ದರಿಂದ ಇವತ್ತು ಸಂಚಾರ ಪೊಲೀಸರು ಸ್ವಚ್ಛತಾ ಕಾರ್ಯ ಕೈಗೊಂಡರು.

ಆಯನೂರು ಸರ್ಕಲ್ನಲ್ಲಿ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಟ್ಯಾಂಕರ್ನಲ್ಲಿ ನೀರು ತರಿಸಿ, ಆಯಿಲ್ ಚೆಲ್ಲಿದ್ದ ಕಡೆಯಲ್ಲೆಲ್ಲ ಹಾಯಿಸಿದ್ದಾರೆ. ರಸ್ತೆಯನ್ನು ಸ್ವಚ್ಛಗೊಳಿಸಿ ಸುಗಮನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಪಶ್ಚಿಮ ಸಂಚಾರ ಠಾಣೆ ಪಿಎಸ್ಐ ತಿರುಮಲೇಶ್, ಎಆರ್ಎಸ್ಐ ಪ್ರಕಾಶ್, ಎಎಸ್ಐ ಮಂಜುನಾಥ್, ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಪಟೇಲ್, ಕಾನ್ಸ್ಟೇಬಲ್ ಹರೀಶ್, ದಿನೇಶ್, ಪ್ರಶಾಂತ್ ಸ್ವಚ್ಛತಾ ಕಾರ್ಯ ನಡೆಸಿದರು.

ಇದನ್ನೂ ಓದಿ » ತ್ಯಾವರೆಕೊಪ್ಪ ಮೃಗಾಲಯದ ಮತ್ತೊಂದು ಹುಲಿ ಸಾವು, ಈ ವರ್ಷದಲ್ಲಿ ಎರಡನೇ ಟೈಗರ್ ಕೊನೆಯುಸಿರು
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು















