ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕೊಪ್ಪಳದಲ್ಲಿ ಮಾರ್ಚ್ 9ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ತಿಳಿಸಿದ್ದಾರೆ.ಶಿವಮೊಗ್ಗದ ಮೂವರು ಪತ್ರಕರ್ತರಿಗೆ ಪ್ರಶಸ್ತಿ
ಶಿವಮೊಗ್ಗ : ಜಿಲ್ಲೆಯ ಮೂವರು ಪತ್ರಕರ್ತರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ (Award) ಪ್ರಕಟಿಸಲಾಗಿದೆ. ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ ಶೃಂಗೇರಿ ಅವರಿಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ, ಹಿರಿಯ ಪತ್ರಕರ್ತ ಗಿರೀಶ್ ಉಮ್ರಾಯ್ ಅವರಿಗೆ ಹೆಚ್.ಎಸ್.ರಂಗಸ್ವಾಮಿ ಪ್ರಶಸ್ತಿ, ಸಂಯುಕ್ತ ಕರ್ನಾಟಕದ ವರದಿಗಾರ್ತಿ ಕವಿತಾ ಅವರಿಗೆ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ ಪ್ರಕಟಿಸಲಾಗಿದೆ. 
ಕಳೆದ 20 ವರ್ಷಗಳಿಂದ ಮುದಸ್ಸಿರ್ ಅಹ್ಮದ್ ಉರ್ದು ಮತ್ತು ಕನ್ನಡ ಭಾಷೆಯ ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದು ಪತ್ರಿಕೋದ್ಯಮದಲ್ಲಿ ಅವರ ಸಾಧನೆಗೆ ದೊಡ್ಡ ಗೌರವವಾಗಿದೆ. ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆಶಿವಮೊಗ್ಗದ ಮುದಸ್ಸಿರ್ ಅಹ್ಮದ್ಗೆ ಪ್ರಶಸ್ತಿ
ಬೆಂಗಳೂರು : ಶಿವಮೊಗ್ಗದಿಂದ ಪ್ರಕಟವಾಗುವ ಆಜ್ ಕಾ ಇನ್ಕಲಾಬ್ ಪತ್ರಿಕೆ ಸಂಪಾದಕ ಮುದಸ್ಸಿರ್ ಅಹ್ಮದ್ ಅವರು ಉರ್ದು ಅಕಾಡೆಮಿಯಿಂದ ಅತ್ಯುತ್ತಮ ಪತ್ರಕರ್ತ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ.
ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ
ಶಿವಮೊಗ್ಗ : ಬೆಜ್ಜವಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.4 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಭಾಗದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 8277882835 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಪ್ರಮೋದ್ ಮುತಾಲಿಕ್ಗೆ ತಡೆ, ನೊಟೀಸ್ ಕೊಟ್ಟು ಗಡಿ ದಾಟಿಸಿದ ಪೊಲೀಸ್, ಯಾಕೆ?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





