ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಭದ್ರಾ ಕಾಡಾ ವ್ಯಾಪ್ತಿಯ ವಾರಾಹಿ ಯೋಜನೆ (Project) ಅಣೆಕಟ್ಟು ಹಾಗೂ ಅಚ್ಚುಕಟ್ಟು ಭಾಗದ ಸ್ಥಳವನ್ನು ಪರಿವೀಕ್ಷಿಸಿ, ರೈತರೊಂದಿಗೆ ಯೋಜನೆಯ ಕಾರ್ಯರೂಪದ ಕುರಿತು ಚರ್ಚಿಸಿದರು.
ನಂತರ ಭದ್ರಾಕಾಡಾ ಸಿದ್ದಾಪುರ ಕಚೇರಿಯಲ್ಲಿ ಕಾಡಾ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ಸಭೆ ನಡೆಸಿದರು. ಹೆಚ್ಚು ನೀರು ನಾಲೆಗಳಲ್ಲಿ ವ್ಯರ್ಥವಾಗಲು ಅವಕಾಶ ನೀಡದೆ ರೈತರ ಬೆಳೆಗಳಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಸಕಾಲಕ್ಕೆ ನೀರು ಒದಗಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ. ರೈತರಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ರೈತರ ಅಹವಾಲು ಆಲಿಸಿ ಸೂಕ್ತ ಪರಿಹಾರಕ್ಕಾಗಿ, ಇಲಾಖೆ ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತಂದು ಅಚ್ಚುಕಟ್ಟು ಭಾಗದ ರೈತರ ಹಿತ ಕಾಪಾಡುವ ಭರವಸೆ ನೀಡಿದರು.

ಭದ್ರಾ ಕಾಡಾ ಆಡಳಿತಾಧಿಕಾರಿ, ಭೂ ಅಭಿವೃದ್ಧಿ ತಾಂತ್ರಿಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಯೋಜನೆಗೆ ಸಂಬಂಧಿಸಿದ ಎಂಜಿನಿಯರ್ಗಳು ಉಪಸ್ಥಿತರಿದ್ದರು.

ಇದನ್ನೂ ಓದಿ » ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





