ಸಿಗಂದೂರು ಲಾಂಚ್‌, ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ : ಸಿಗಂದೂರು ಲಾಂಚ್‌ಗೆ (Launch) ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗಲಾಟೆ ಆಗಿದ್ದೇಕೆ?

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ, ತಾಯಿ ಪ್ರಭಾ, ಸಹೋದರ ಪವನ್‌ಕುಮಾರ್ ಮತ್ತು ಮಾವನ ಮಗ ವಿನಾಯಕ್ ಪ್ರಸಾದ್ ಎಂಬುವರು ಸಂಬಂಧಿಕರ ಮದುವೆಗೆಂದು ಸಾಗರಕ್ಕೆ ಬಂದಿದ್ದರು. ಅಲ್ಲಿಂದ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಓಮ್ನಿ ಕಾರಿನಲ್ಲಿ ಹೊರಟಿದ್ದರು. ವಾಹನಗಳನ್ನು ಸರದಿಯಲ್ಲಿ ಲಾಂಚ್‌ಗೆ ಬಿಡುವ ವಿಚಾರದಲ್ಲಿ ಟಿಕೆಟ್ ಕಲೆಕ್ಟರ್ ಮತ್ತು ಕಾರಿನಲ್ಲಿದ್ದ ವಿನಯ್‌ ಪ್ರಸಾದ್‌ ಮಧ್ಯೆ ವಾಗ್ವಾದ ನಡೆದಿತ್ತು. ಬಳಿಕ ದೇವಸ್ಥಾನಕ್ಕೆ ತೆರಳಲು ಕುಟುಂಬದವರು ಲಾಂಚ್‌ಗೆ ಓಮ್ನಿ ಕಾರು ಹಾಕಿದ್ದರು.

Sigandur-Launch-in-Sharavathi-River

ಗುಂಪು ಕಟ್ಟಿಕೊಂಡು ಬಂದು ಹಲ್ಲೆ

ಬಳಿಕ ಗುಂಪು ಕಟ್ಟಿಕೊಂಡು ಬಂದ ಟಿಕೆಟ್‌ ಕಲೆಕ್ಟರ್‌, ಓಮ್ನಿಯಲ್ಲಿದ್ದ ವಿನಾಯಕ, ಪವನ್‌ಕುಮಾರ್‌ ಮೇಲೆ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಓಮ್ನಿಗೆ ಹಾನಿ ಮಾಡಿದ್ದಾರೆ. ಮಹಿಳೆಯರು ಎಂಬುದನ್ನು ಲೆಕ್ಕಿಸದೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ದೂರಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಸಾಗರದ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಘಟನೆ ಸಂಬಂಧ ಕಾರ್ಗಲ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

NATIONAL-PUBLIC-SCHOOL-scaled

ಇದನ್ನೂ ಓದಿ » ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ, ಶೋಧ ಕಾರ್ಯಾಚರಣೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment