ಶಿವಮೊಗ್ಗ ಲೈವ್
ಶಿವಮೊಗ್ಗ : ನಕ್ಸಲರ (Naxal) ವಿರುದ್ಧದ ಕಾರ್ಯಾಚರಣೆಗೆ ಸ್ಥಾಪಿಸಲಾಗಿದ್ದ ನಕ್ಸಲ್ ನಿಗ್ರಹ (ಎಎನ್ಎಫ್) ಪಡೆಯನ್ನು ವಿಸರ್ಜನೆಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಬಜೆಟ್ನಲ್ಲಿ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್ ಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕೂಡ ಘೋಷಿಸಿದ್ದಾರೆ.
ಈಚೆಗೆ ಆರು ನಕ್ಸಲರು ಶರಣಾಗಿದ್ದರು. ಇದರಿಂದ ರಾಜ್ಯವು ನಕ್ಸಲ್ ಮುಕ್ತವಾಗಿದೆ. ಆದ್ದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?

ಇನ್ನು, ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆ ಮಾಡಲು ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್ ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?

ಇದನ್ನೂ ಓದಿ » ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್ನಲ್ಲಿ ಮಹತ್ವದ ಪ್ರಸ್ತಾಪ, ಏನದು?